National

ರಾಜ್ಯದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ: ₹75 ಕೋಟಿ ಮೌಲ್ಯದ ಎಂಡಿಎಂಎ ವಶ, ದಕ್ಷಿಣ ಆಫ್ರಿಕಾ ಮಹಿಳೆಯರ ಬಂಧನ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ 37.5 ಕೆಜಿ ತೂಕದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ₹74 ಕೋಟಿ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಆರು ತಿಂಗಳಿಗೊಂದು ಭಾರೀ ಕಾರ್ಯಾಚರಣೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಬಾ ಫಾಂಟಾ (31) ಹಾಗೂ ಅಬಿಗೈಲ್ ಅಡೋನಿಸ್ (30) ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು, ಕಳೆದ ಆರು ತಿಂಗಳಿನಿಂದ ಈ ಜಾಲವನ್ನು ಭೇದಿಸುವ ಕಾರ್ಯಾಚರಣೆ ನಡೆಯುತ್ತಿತ್ತು ಎಂದು ವಿವರಿಸಿದರು.

ಈ ಕಾರ್ಯಾಚರಣೆಯ ಪ್ರಾರಂಭವು ಮಂಗಳೂರು ಪಂಪ್‌ವೆಲ್ ಬಳಿಯ ಲಾಡ್ಜ್‌ನಲ್ಲಿ ಹೈದರ್ ಅಲಿ ಎಂಬವನ ಬಂಧನದಿಂದ ಆರಂಭವಾಯಿತು. ಆತನಿಂದ 15 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡು, ಆತನ ವಿಚಾರಣೆಯಿಂದಾಗಿ ದೊಡ್ಡ ಮಾದಕ ವಸ್ತು ಜಾಲ ಪತ್ತೆಯಾಯಿತು. ಪ್ರಕರಣವನ್ನು ಸಿಸಿಬಿ ಪೊಲೀಸ್‌ರಿಗೆ ಹಸ್ತಾಂತರಿಸಿ, ಆರು ತಿಂಗಳ ಪಟ್ಟಿ ಮೇಲ್ವಿಚಾರಣೆಯ ನಂತರ, ಬೆಂಗಳೂರು ಮತ್ತು ದೆಹಲಿಯಲ್ಲಿಯೂ ಕಾರ್ಯಾಚರಣೆ ನಡೆಸಲಾಯಿತು.

ನೈಜೀರಿಯಾ ಮೂಲದ ಪೀಟರ್ ಬಂಧನ

ಇದರಡಿ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ನೈಜೀರಿಯಾ ಪ್ರಜೆ ಪೀಟರ್‌ನನ್ನು ಬಂಧಿಸಲಾಗಿತ್ತು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡು, ವಿಚಾರಣೆ ಮುಂದುವರಿಸಿದಾಗ ದೆಹಲಿಯಿಂದ ಬಂದಿದ್ದ ಇಬ್ಬರು ಮಹಿಳೆಯರು ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದಾರೆ ಎಂಬುದು ಪತ್ತೆಯಾಯಿತು. ಈ ಮಾಹಿತಿ ಮೇರೆಗೆ ಇವರನ್ನು ಬಂಧಿಸಿ 37.878 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಯಿತು.

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳು

  • 37.878 ಕೆಜಿ ಎಂಡಿಎಂಎ (ಮೌಲ್ಯ ₹75 ಕೋಟಿ)
  • 4 ಮೊಬೈಲ್ ಫೋನ್‌ಗಳು
  • 2 ಪಾಸ್‌ಪೋರ್ಟ್‌ಗಳು
  • ಟ್ರಾಲಿ ಬ್ಯಾಗ್‌
  • ₹18,460 ನಗದು

ಮಾದಕ ವಸ್ತು ಸಾಗಾಟದ ಜಾಲ

ಬಂಧಿತ ಮಹಿಳೆಯರು ದೆಹಲಿಯಿಂದ ಮಾದಕ ವಸ್ತುಗಳನ್ನು ತಂದಿದ್ದು, ಬೆಂಗಳೂರಿನಲ್ಲಿ ನೆಲೆಸಿದ ನೈಜೀರಿಯಾ ಪ್ರಜೆಗಳ ಮೂಲಕ ದೇಶದ ವಿವಿಧೆಡೆ ವಿತರಿಸುತ್ತಿದ್ದರು. ಈ ಜಾಲದಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿಯೂ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಂತಾರಾಜ್ಯ ಮಾಫಿಯಾದ ಮತ್ತೊಬ್ಬ ಬಂಧನ

ಇದೇ ಸಂದರ್ಭದಲ್ಲಿ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಬ್ಬ ಡ್ರಗ್ಸ್ ಮಾಫಿಯಾ ಲೀಡರ್ ಅಬ್ದುಲ್ ಫೈಜಲ್ ಅಲಿಯಾಸ್ ಫೈಜು (26) ಬಂಧನ ಗೊಂಡಿದ್ದಾನೆ. ಮಂಜೇಶ್ವರ, ಕಾಸರಗೋಡು ಮೂಲದ ಈತ ಡ್ರಗ್ಸ್ ಜಾಲದ ಕಿಂಗ್‌ಪಿನ್ ಆಗಿದ್ದು, ತಲೆಮರೆಸಿಕೊಂಡಿದ್ದನು.

ಆರೋಪಿಯಿಂದ ವಶಪಡಿಸಿಕೊಂಡ ವಸ್ತುಗಳು:

  • 1 ಪಿಸ್ತೂಲ್
  • 1 ಸಜೀವ ಮದ್ದುಗುಂಡು
  • 1 ಮೊಬೈಲ್ ಫೋನ್

ಈತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು ಈಗಾಗಲೇ ದಾಖಲಾಗಿದ್ದವು.

ಪೊಲೀಸ್ ಅಧಿಕಾರಿಗಳ ಪ್ರತಿಕ್ರಿಯೆ

ಈ ಭಾರಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹಾಗೂ ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್, ಕೆ. ರವಿಶಂಕರ್, ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ, ಇನ್‌ಸ್ಪೆಕ್ಟರ್ ರಫೀಕ್ ಕೆ.ಎಂ., ಪಿಎಸ್‌ಐ ಸುದೀಪ್ ಎಂ.ವಿ. ಮತ್ತು ಶರಣಪ್ಪ ಭಂಡಾ ಸೇರಿ ಹಲವರು ಭಾಗವಹಿಸಿದ್ದರು.

ಈ ಜಾಲವನ್ನು ಇನ್ನಷ್ಟು ಭೇದಿಸಲು ಪೊಲೀಸರು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago