Latest

ವಂಚಕ ಪ್ರೇಮಿಯ ಲವ್ ಡ್ರಾಮಾ ಕೊನೆಗೆ ದಾರುಣ ಅಂತ್ಯ: ನದಿಗೆ ಹಾರಿ ವಿವಾಹಿತೆ ಮಹಿಳೆ ಆತ್ಮಹತ್ಯೆ!

ವಿಜಯನಗರ: ಇನ್‌ಸ್ಟಾಗ್ರಾಂನಲ್ಲಿ ಶುರುವಾಯಿಸಿದ ಪರಿಚಯ ಪ್ರೀತಿಯಾಗಿ ಬೆಳೆದಿದ್ದು, ಕೊನೆಗೆ ಸಾವು ಎಂಬ ಕರಾಳ ಅಂತ್ಯಕ್ಕೆ ಕಾರಣ ಆಗಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ಮದಲಗಟ್ಟಿ ಗ್ರಾಮದ ಜ್ಯೋತಿ ಎಂಬ ವಿವಾಹಿತ ಮಹಿಳೆ, ಪ್ರೇಮಿ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದ್ದು, ಇದನ್ನು ದೃಢಪಡಿಸುವ ಡೆತ್ ನೋಟ್ ಕೂಡ ಸಿಕ್ಕಿದೆ.

ಪ್ರೇಮದ ಆರಂಭ ಇನ್‌ಸ್ಟಾಗ್ರಾಂನಲ್ಲಿ:

ಅಕ್ಟೋಬರ್ 2024ರಲ್ಲಿ ಜ್ಯೋತಿ ಮತ್ತು ಶಿವಮೊಗ್ಗ ಜಿಲ್ಲೆಯ ಸುಗೂರು ಮೂಲದ ಬಸವರಾಜ್ ಎಂಬ ಯುವಕನಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದದ್ದು, ನಂತರ ಪ್ರೀತಿಯಾಗಿ ರೂಪಾಂತರಗೊಂಡಿತ್ತು. ಮೊದಲಿಗೆ ಬಸವರಾಜ್ ಸ್ವತಃ ಮೆಸೇಜ್ ಮೂಲಕ ಸಂಪರ್ಕ ಸಾಧಿಸಿದ್ದ. ಪ್ರಾರಂಭದಲ್ಲಿ ಜ್ಯೋತಿ ಆಸಕ್ತಿಯಿಲ್ಲದಿದ್ದರೂ, ಆಸಕ್ತಿಯಿಂದ ಮೆಸೇಜ್ ಮಾಡುವ ಮೂಲಕ ತನ್ನ ಹೃದಯ ಗೆದ್ದಿದ್ದ ಎಂದು ಡೆತ್ ನೋಟ್‌ನಲ್ಲಿ ಬರೆಯಲಾಗಿದೆ.

ವಿಶ್ವಾಸಘಾತ ಮತ್ತು ನೋವಿನ ನಿಜಕಥೆ:

ಬಸವರಾಜ್, ಜ್ಯೋತಿಯೊಂದಿಗೆ ಒಡನಾಟ ಮುಂದುವರೆಸಿದ್ದರೂ, ಇತರ ಯುವತಿಯರ ಜೊತೆಗೂ ಸಂಪರ್ಕದಲ್ಲಿದ್ದ ಎಂಬ ವಿಚಾರ ತಿಳಿದ ಜ್ಯೋತಿ, ಆತನ ವಾಟ್ಸಾಪ್, ಇನ್‌ಸ್ಟಾಗ್ರಾಂ, ಜಿಮೇಲ್ ಖಾತೆಗಳನ್ನು ಹ್ಯಾಕ್ ಮಾಡಿದ್ದಳು. ಈತನಿಗೆ ನಂಬಿ, ಲಾಡ್ಜ್‌ಗಳಿಗೆ ಹೋಗಿ ಪೋಟೋಸ್, ಸೆಕ್ಸ್ ಮಾಡಿದ್ದು ಕೂಡ ನನ್ನ ಪೋನ್ ನಲ್ಲಿ, ರೆಕಾರ್ಡಿಂಗ್‌ಗಳು ತನ್ನ ಮೊಬೈಲ್‌ನಲ್ಲಿ ಇವೆ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ವಾಗ್ದಾನ ವಿಫಲ – ಆತ್ಮಹತ್ಯೆ:

ಬಸವರಾಜ್ ಮದುವೆಯಾಗುವುದಾಗಿ ಮಾತುಕತೆ ನಡೆಸಿದ್ದರೂ, ನಂತರ ಅವಳನ್ನು ದೂರ ಮಾಡುತ್ತಾ ಶುರುವಿಟ್ಟಿದ್ದ. ಇದರಿಂದ ತೀವ್ರ ಮನೋನೊಂದಿಗೊಳಗಾದ ಜ್ಯೋತಿ, ತನ್ನ ಬದುಕಿಗೆ ಅಂತ್ಯ ಹಾಕಿಕೊಳ್ಳಲು ನಿರ್ಧರಿಸಿದ್ದಳು. ಜುಲೈ 26ರಂದು ತುಂಗಭದ್ರಾ ನದಿಯ ಸೇತುವೆಯಿಂದ ಜಂಪ್ ಮಾಡಿದ ಘಟನೆಯನ್ನು ದೃಷ್ಟಿಪಥದಲ್ಲಿ ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶವವನ್ನೇ ದೋರಿ ಹೊರತೆಗೆಯಲಾಗಿದೆ.

ಡೆತ್ ನೋಟ್‌ನಲ್ಲಿರುವ ಭಾರಿ ಆರೋಪ:

ಡೆತ್ ನೋಟ್‌ನಲ್ಲಿ ಜ್ಯೋತಿ, “ನನ್ನ ಸಾವಿಗೆ ಸುಗೂರು ಶಿವಮೂರ್ತಿ ಗಾಣಿಗನ ಮಗ ಬಸವರಾಜ್ ಕಾರಣ. ಈತ ನನಗೆ ಮದುವೆ ಆಗ್ತೀನಿ ಅಂತ ಸುಳ್ಳು ಹೇಳಿ, ನನ್ನೊಂದಿಗೆ ಶಾರೀರಿಕ ಸಂಬಂಧ ಬೆಳೆಸಿದ. ನನ್ನ ಗಂಡನನ್ನೂ ಸಾಯಿಸಿ ನಿನ್ನ ಹೆಸರಿಗೆ ಆಸ್ತಿ ಮಾಡಿಸಿಕೊಳ್ಳೋಕೆ ತಯಾರಿ ತೋರಿಸಿದ್ದ. ಇವನಿಗೂ ಮರಣದಂಡನೆ ಆಗಬೇಕು,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ:

ಪೊಲೀಸರು ಈಗಾಗಲೇ ಡೆತ್ ನೋಟ್‌ ಮತ್ತು ಮೊಬೈಲ್‌ ಡೇಟಾವನ್ನು ವಶಪಡಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಸವರಾಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ತಯಾರಿ ನಡೆಯುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago