Latest

ವಿವಾಹಿತೆಯ ಪ್ರೇಮ ಪುರಾಣ: ಮೂರನೆಯವನ ಜೊತೆ ಸೇರಿ ಎರಡನೆಯವನನ್ನು ಕೊಂದಳು!

ವಿವಾಹಿತೆ ಹಿಂದೆ ಬಿದ್ದು ಯುವಕನೊಬ್ಬ ಬರ್ಬರವಾಗಿ ಕೊಲೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕೋಲಾರದ ಮಾಲೂರು ತಾಲೂಕಿನ ಅಯ್ಯಪ್ಪನಗರದ ನಿವಾಸಿ ಚೇತನ್ ಮೃತ ದುರ್ದೈವಿ. ಕಳೆದ ಅಕ್ಟೋಬರ್‌ 26ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಬ್ರಿಡ್ಜ್‌ ಸಮೀಪದ ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಚೇತನ್‌ ಎಂದು ಗುರುತಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್‌ವೊಂದು ಸಿಕ್ಕಿದೆ.

ಶೋಭಾ ಈ ಹಿಂದೆ ಅತ್ತಿಬೆಲೆ ಕೊಲೆ ಯತ್ನ ಪ್ರಕರಣದಲ್ಲಿ ಜೈಲಿಗೆ ಸೇರಿದ್ದಳು. ಪತಿ, ಅತ್ತೆ, ಮಾವರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ್ದಳು. ಈ ಪ್ರಕರಣದಲ್ಲಿ ಜೈಲು ಸೇರಿ ಬೇಲ್ ಮೇಲೆ ರಿಲೀಸ್ ಆಗಿದ್ದಳು. ಜೈಲಿನಿಂದ ಹೊರಬಂದ ಮೇಲೆ ಟಿಸಿ ಪಾಳ್ಯದಲ್ಲಿ ವಾಸವಾಗಿದ್ದಳು. ಅಲ್ಲೇ ಸಲೂನ್ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು.

ನಂತರ ಶೋಭಾ ಚೇತನ್‌ಗೆ 8 ತಿಂಗಳ ಹಿಂದೆ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಈತನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ನಡುವೆ ಕಳೆದ ಮೂರು ತಿಂಗಳ ಹಿಂದೆ ಶೋಭಾಳಿಗೆ ಸತೀಶ್ ಎಂಬಾತನ ಪರಿಚಯವಾಗಿತ್ತು. ಆತನ ಜತೆಗೂ ಪ್ರೇಮ ಪುರಾಣ ಶುರು ಮಾಡಿದ್ದಳು. ಸತೀಶ್ ಹಣಕಾಸಿನ ವಿಚಾರದಲ್ಲಿ ಚೇತನ್‌ಕ್ಕಿಂತ ಹಣವಂತನಾಗಿದ್ದ. ಶೋಭಾಳಿಗಾಗಿ ಹೊಸದೊಂದು ಸಲೂನ್ ಬ್ಯೂಟಿ ಪಾರ್ಲರ್ ಮಾಡಿಕೊಡಲು ಸಿದ್ಧತೆ ನಡೆಸಿದ್ದ. ಈ ನಡುವೆ ಶೋಭಾ ಚೇತನ್‌ನಿಂದ ದೂರವಾಗಲು ನಿರ್ಧರಿಸಿದ್ದಳು.

ಹೀಗಾಗಿ ಸತೀಶ್‌ ಜತೆಗೆ ನಾಟಕವಾಡಲು ಶುರು ಮಾಡಿದ್ದಳು. ಚೇತನ್ ತನ್ನ ಹಿಂದೆ ಬಿದ್ದು ಪೀಡಿಸುತ್ತಿದ್ದಾನೆ ಎಂದು ಕಥೆ ಕಟ್ಟಿದ್ದಳು. ಅದಾದ ಬಳಿಕ ಸತೀಶ್‌ ಜತೆ ಸೇರಿ ಚೇತನ್ ಕೊಲೆ ಮಾಡಲು ಸಂಚು ರೂಪಿಸಿದ್ದಳು. ಕಳೆದ ಅ.26ರಂದು ಹೊಸಕೋಟೆ ಐಶ್ವರ್ಯ ಬಾರ್‌ನಲ್ಲಿ ಎಣ್ಣೆ ಪಾರ್ಟಿ ಯೋಜಿಸಿದ್ದಳು. ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಮುಗಳೂರು ಬಳಿ ಬಂದಾಗ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಹೊಳೆಗೆ ಎಸೆದು ಹೋಗಿದ್ದರು.
ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ವಿವಾಹಿತ ಮಹಿಳೆಗಾಗಿ ಈ ಕೊಲೆ ನಡೆದಿದೆ ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಸರ್ಜಾಪುರ ಪೊಲೀಸರು ಆರೋಪಿಗಳಾದ ಸತೀಶ್, ಶಶಿ ಹಾಗೂ ಶೋಭಾಳನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

4 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

5 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

5 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago