Latest

ವಿವಾಹಿತೆಯ ಪ್ರೇಮ ಪುರಾಣ: ಮೂರನೆಯವನ ಜೊತೆ ಸೇರಿ ಎರಡನೆಯವನನ್ನು ಕೊಂದಳು!

ವಿವಾಹಿತೆ ಹಿಂದೆ ಬಿದ್ದು ಯುವಕನೊಬ್ಬ ಬರ್ಬರವಾಗಿ ಕೊಲೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕೋಲಾರದ ಮಾಲೂರು ತಾಲೂಕಿನ ಅಯ್ಯಪ್ಪನಗರದ ನಿವಾಸಿ ಚೇತನ್ ಮೃತ ದುರ್ದೈವಿ. ಕಳೆದ ಅಕ್ಟೋಬರ್‌ 26ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಬ್ರಿಡ್ಜ್‌ ಸಮೀಪದ ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಚೇತನ್‌ ಎಂದು ಗುರುತಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್‌ವೊಂದು ಸಿಕ್ಕಿದೆ.

ಶೋಭಾ ಈ ಹಿಂದೆ ಅತ್ತಿಬೆಲೆ ಕೊಲೆ ಯತ್ನ ಪ್ರಕರಣದಲ್ಲಿ ಜೈಲಿಗೆ ಸೇರಿದ್ದಳು. ಪತಿ, ಅತ್ತೆ, ಮಾವರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ್ದಳು. ಈ ಪ್ರಕರಣದಲ್ಲಿ ಜೈಲು ಸೇರಿ ಬೇಲ್ ಮೇಲೆ ರಿಲೀಸ್ ಆಗಿದ್ದಳು. ಜೈಲಿನಿಂದ ಹೊರಬಂದ ಮೇಲೆ ಟಿಸಿ ಪಾಳ್ಯದಲ್ಲಿ ವಾಸವಾಗಿದ್ದಳು. ಅಲ್ಲೇ ಸಲೂನ್ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು.

ನಂತರ ಶೋಭಾ ಚೇತನ್‌ಗೆ 8 ತಿಂಗಳ ಹಿಂದೆ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಈತನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ನಡುವೆ ಕಳೆದ ಮೂರು ತಿಂಗಳ ಹಿಂದೆ ಶೋಭಾಳಿಗೆ ಸತೀಶ್ ಎಂಬಾತನ ಪರಿಚಯವಾಗಿತ್ತು. ಆತನ ಜತೆಗೂ ಪ್ರೇಮ ಪುರಾಣ ಶುರು ಮಾಡಿದ್ದಳು. ಸತೀಶ್ ಹಣಕಾಸಿನ ವಿಚಾರದಲ್ಲಿ ಚೇತನ್‌ಕ್ಕಿಂತ ಹಣವಂತನಾಗಿದ್ದ. ಶೋಭಾಳಿಗಾಗಿ ಹೊಸದೊಂದು ಸಲೂನ್ ಬ್ಯೂಟಿ ಪಾರ್ಲರ್ ಮಾಡಿಕೊಡಲು ಸಿದ್ಧತೆ ನಡೆಸಿದ್ದ. ಈ ನಡುವೆ ಶೋಭಾ ಚೇತನ್‌ನಿಂದ ದೂರವಾಗಲು ನಿರ್ಧರಿಸಿದ್ದಳು.

ಹೀಗಾಗಿ ಸತೀಶ್‌ ಜತೆಗೆ ನಾಟಕವಾಡಲು ಶುರು ಮಾಡಿದ್ದಳು. ಚೇತನ್ ತನ್ನ ಹಿಂದೆ ಬಿದ್ದು ಪೀಡಿಸುತ್ತಿದ್ದಾನೆ ಎಂದು ಕಥೆ ಕಟ್ಟಿದ್ದಳು. ಅದಾದ ಬಳಿಕ ಸತೀಶ್‌ ಜತೆ ಸೇರಿ ಚೇತನ್ ಕೊಲೆ ಮಾಡಲು ಸಂಚು ರೂಪಿಸಿದ್ದಳು. ಕಳೆದ ಅ.26ರಂದು ಹೊಸಕೋಟೆ ಐಶ್ವರ್ಯ ಬಾರ್‌ನಲ್ಲಿ ಎಣ್ಣೆ ಪಾರ್ಟಿ ಯೋಜಿಸಿದ್ದಳು. ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಮುಗಳೂರು ಬಳಿ ಬಂದಾಗ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಹೊಳೆಗೆ ಎಸೆದು ಹೋಗಿದ್ದರು.
ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ವಿವಾಹಿತ ಮಹಿಳೆಗಾಗಿ ಈ ಕೊಲೆ ನಡೆದಿದೆ ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಸರ್ಜಾಪುರ ಪೊಲೀಸರು ಆರೋಪಿಗಳಾದ ಸತೀಶ್, ಶಶಿ ಹಾಗೂ ಶೋಭಾಳನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

5 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

5 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

5 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

5 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

5 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

10 hours ago