Crime

ಷೇರು ಮಾರುಕಟ್ಟೆ ಲಾಭದ ಮಾಯಾಜಾಲ: ವಾಟ್ಸಾಪ್ ಸಂದೇಶ ನಂಬಿ 34 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗ ನಿವಾಸಿ

ಶಿವಮೊಗ್ಗ, ಜುಲೈ 12 – ‘‘ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಭಾರಿ ಲಾಭ ಸಿಗುತ್ತದೆ’’ ಎಂಬ ಸುಳ್ಳು ವಾಟ್ಸಾಪ್ ಸಂದೇಶವೊಂದನ್ನು ನಂಬಿ, ಶಿವಮೊಗ್ಗದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡಿರುವ ದುರ್ಭಾಗ್ಯಕರ ಘಟನೆ ಬೆಳಕಿಗೆ ಬಂದಿದೆ.

ನಗರದ ಬಿ.ಬಿ. ಸ್ಟ್ರೀಟ್‌ ನಿವಾಸಿಯಾಗಿರುವ ವ್ಯಕ್ತಿ (ಹೆಸರು ಗೋಪ್ಯ) ವಾಟ್ಸಾಪ್‌ನಲ್ಲಿ ಬಂದ ಅಪರಿಚಿತ ಸಂದೇಶವೊಂದರ ಆಮಿಷಕ್ಕೆ ಒಳಗಾಗಿ ಸುಮಾರು ₹34.16 ಲಕ್ಷ ಹಣವನ್ನು ವಂಚಕರಿಗೆ ಕಳಿಸಿದ್ದಾರೆ.

ಮಾಹಿತಿಯ ಪ್ರಕಾರ, ವಾಟ್ಸಾಪ್‌ನಲ್ಲಿ ಬಂದಿದೆ ಎಂಬ ಸಂದೇಶದಲ್ಲಿ ಷೇರು ಮಾರುಕಟ್ಟೆಯೊಂದರ ಹೆಸರಿನಲ್ಲಿ ಲಾಭದ ವಾಗ್ದಾನ ನೀಡಲಾಗಿತ್ತು. ನಂಬಿಕೆ ಮೂಡಿಸುವ ರೀತಿಯಲ್ಲಿ ಕಂಪನಿಯ ಪರಿಚಯ, ಹೂಡಿಕೆಗೆ ಮಾರ್ಗದರ್ಶನ ಹಾಗೂ ಆನ್‌ಲೈನ್ ಲಿಂಕ್‌ಗಳನ್ನು ಕಳಿಸಿ ಧನ ಹೂಡಿಕೆಗೆ ಪ್ರೇರೇಪಿಸಲಾಯಿತು.

ಇದೇ ನಂಬಿಕೆಯಿಂದ ದೂರುದಾರರು ಕಳೆದ ಎರಡು ತಿಂಗಳ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಂತ ಹಂತವಾಗಿ ಕೋಟಿ ರೂಪಾಯಿ ತಲುಪುವಂತೆ ಹಣ ವರ್ಗಾಯಿಸಿದ್ದಾರೆ. ಆದರೆ ಹಣ ವರ್ಗಾಯಿಸಿದ ನಂತರ ವಂಚಕರು ಕರೆಗಳಿಗೆ ಸ್ಪಂದಿಸದೆ, ಲಾಭಾಂಶವನ್ನೂ ನೀಡದೆ ಕಾಲಾವಕಾಶ ಕಳೆದಿದ್ದಾರೆ.

ಮೆಸೇಜ್ ಕಳುಹಿಸಿದವರೆಂದೂ, ಹಣ ಪಡೆದ ಖಾತೆಗಳ ವಿವರಗಳೂ ನಕಲಿ ಅಥವಾ ಫೇಕ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಿಇಎನ್ (ಸೈಬರ್, ಇಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದೂರು ಸ್ವೀಕರಿಸಿ ವಂಚಕರನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಸೈಬರ್ ಎಚ್ಚರಿಕೆ: ಇತ್ತೀಚೆಗೆ ವಾಟ್ಸಾಪ್, ಟೆಲಿಗ್ರಾಂ ಸೇರಿದಂತೆ ಹಲವು ಆಪ್‌ಗಳ ಮೂಲಕ ಬರುವ ಹೂಡಿಕೆ ಆಫರ್‌ಗಳನ್ನು ನಂಬುವುದು ಅಪಾಯಕಾರಿಯಾಗಿದ್ದು, ಸಾರ್ವಜನಿಕರು ಯಾವುದೇ ಅನ್‌ವೆರಿಫೈಡ್ ಲಿಂಕ್ ಅಥವಾ ಲಾಭದ ಆಶೆಯ ತಕ್ಷಣದ ಆಫರ್‌ಗಳಿಗೆ ಸ್ಪಂದಿಸದಿರುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago