Latest

ಗ್ರಾಮದ ಮುಖ್ಯರಸ್ತೆಯೇ ಕೊಳಚೆಮಯ!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿಯ ಮುಂದಗಡೆ ಇರುವ ರಸ್ತೆಯ ದುಸ್ಥಿತಿ ಇದು.ಪ್ರತಿದಿನ ಗ್ರಾಮದ ಜನರು ಇದೇ ಪರಿಸ್ಥಿತಿ ಅನುಭವಿಸಬೇಕು. ಶಾಲೆಗೆ ವಿದ್ಯಾರ್ಥಿಗಳು ಹೋಗಲು ಹಾಗೂ ಗ್ರಾಮದ ಜನರು ಓಡಾಡಲು ಮುಖ್ಯರಸ್ತೆಯಾಗಿರುವ ಈ ರಸ್ತೆಯೇ ಈ ರೀತಿಯಾಗಿದ್ದು ಸುಮಾರು ದಿನಗಳಿಂದ ಇದೇ ಪರಿಸ್ಥಿತಿ ಅನುಭವಿಸುತಿದ್ದು. ಇದರ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸದೇ ಇರುವುದು ನಾಚಿಕೆ ಗೇಡಿನ ಸಂಗತಿ.ಗ್ರಾಮದಲ್ಲಿ ಪಂಚಾಯತಿ ಇದ್ದು ಇಲ್ಲದಂತಾಗಿದೆ. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು ಪರದಾಡುವ ಪರಿಸ್ಥಿತಿ ಎದುರಾಗಿದೆ. ದುರ್ವಾಸನೆಯಿಂದ ಸರಿಯಾಗಿ ದಿನಾಲೂ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುವ ಸಾದ್ಯತೆ ಹೆಚ್ಚಿದೆ. ಚರಂಡಿಗಳು ಇಲ್ಲದೆ ಇರುವ ಕಾರಣ ಗ್ರಾಮದ ಜನರ ಬಚ್ಚಲು ನೀರು ರಸ್ತೆಯ ಮೇಲೆಯೇ ಬಿಡುತ್ತಾರೆ. ಹಲವು ಬಾರಿ ಮೌಖಿಕವಾಗಿ ಗ್ರಾಮದ ಜನರು ಪಂಚಾಯತಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ.  ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಶಿವಾನಂದ ತೊಳಾನುರ ಹಾಗೂ ಕಾರ್ಯದರ್ಶಿ ನಿರಂಜನಪ್ಪ ದಳವಾಯಿ ಯಾವ ರೀತಿ ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯದಾಗಿದೆ. ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವರಾ ಇಲ್ಲವಾ ಕಾದು ನೋಡೋಣ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

15 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

15 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

15 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago