Latest

ಗ್ರಾಮದ ಮುಖ್ಯರಸ್ತೆಯೇ ಕೊಳಚೆಮಯ!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿಯ ಮುಂದಗಡೆ ಇರುವ ರಸ್ತೆಯ ದುಸ್ಥಿತಿ ಇದು.ಪ್ರತಿದಿನ ಗ್ರಾಮದ ಜನರು ಇದೇ ಪರಿಸ್ಥಿತಿ ಅನುಭವಿಸಬೇಕು. ಶಾಲೆಗೆ ವಿದ್ಯಾರ್ಥಿಗಳು ಹೋಗಲು ಹಾಗೂ ಗ್ರಾಮದ ಜನರು ಓಡಾಡಲು ಮುಖ್ಯರಸ್ತೆಯಾಗಿರುವ ಈ ರಸ್ತೆಯೇ ಈ ರೀತಿಯಾಗಿದ್ದು ಸುಮಾರು ದಿನಗಳಿಂದ ಇದೇ ಪರಿಸ್ಥಿತಿ ಅನುಭವಿಸುತಿದ್ದು. ಇದರ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸದೇ ಇರುವುದು ನಾಚಿಕೆ ಗೇಡಿನ ಸಂಗತಿ.ಗ್ರಾಮದಲ್ಲಿ ಪಂಚಾಯತಿ ಇದ್ದು ಇಲ್ಲದಂತಾಗಿದೆ. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು ಪರದಾಡುವ ಪರಿಸ್ಥಿತಿ ಎದುರಾಗಿದೆ. ದುರ್ವಾಸನೆಯಿಂದ ಸರಿಯಾಗಿ ದಿನಾಲೂ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುವ ಸಾದ್ಯತೆ ಹೆಚ್ಚಿದೆ. ಚರಂಡಿಗಳು ಇಲ್ಲದೆ ಇರುವ ಕಾರಣ ಗ್ರಾಮದ ಜನರ ಬಚ್ಚಲು ನೀರು ರಸ್ತೆಯ ಮೇಲೆಯೇ ಬಿಡುತ್ತಾರೆ. ಹಲವು ಬಾರಿ ಮೌಖಿಕವಾಗಿ ಗ್ರಾಮದ ಜನರು ಪಂಚಾಯತಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ.  ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಶಿವಾನಂದ ತೊಳಾನುರ ಹಾಗೂ ಕಾರ್ಯದರ್ಶಿ ನಿರಂಜನಪ್ಪ ದಳವಾಯಿ ಯಾವ ರೀತಿ ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯದಾಗಿದೆ. ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವರಾ ಇಲ್ಲವಾ ಕಾದು ನೋಡೋಣ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

6 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

6 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

6 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

6 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

21 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

21 hours ago