ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿಯ ಮುಂದಗಡೆ ಇರುವ ರಸ್ತೆಯ ದುಸ್ಥಿತಿ ಇದು.ಪ್ರತಿದಿನ ಗ್ರಾಮದ ಜನರು ಇದೇ ಪರಿಸ್ಥಿತಿ ಅನುಭವಿಸಬೇಕು. ಶಾಲೆಗೆ ವಿದ್ಯಾರ್ಥಿಗಳು ಹೋಗಲು ಹಾಗೂ ಗ್ರಾಮದ ಜನರು ಓಡಾಡಲು ಮುಖ್ಯರಸ್ತೆಯಾಗಿರುವ ಈ ರಸ್ತೆಯೇ ಈ ರೀತಿಯಾಗಿದ್ದು ಸುಮಾರು ದಿನಗಳಿಂದ ಇದೇ ಪರಿಸ್ಥಿತಿ ಅನುಭವಿಸುತಿದ್ದು. ಇದರ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸದೇ ಇರುವುದು ನಾಚಿಕೆ ಗೇಡಿನ ಸಂಗತಿ.ಗ್ರಾಮದಲ್ಲಿ ಪಂಚಾಯತಿ ಇದ್ದು ಇಲ್ಲದಂತಾಗಿದೆ. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು ಪರದಾಡುವ ಪರಿಸ್ಥಿತಿ ಎದುರಾಗಿದೆ. ದುರ್ವಾಸನೆಯಿಂದ ಸರಿಯಾಗಿ ದಿನಾಲೂ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುವ ಸಾದ್ಯತೆ ಹೆಚ್ಚಿದೆ. ಚರಂಡಿಗಳು ಇಲ್ಲದೆ ಇರುವ ಕಾರಣ ಗ್ರಾಮದ ಜನರ ಬಚ್ಚಲು ನೀರು ರಸ್ತೆಯ ಮೇಲೆಯೇ ಬಿಡುತ್ತಾರೆ. ಹಲವು ಬಾರಿ ಮೌಖಿಕವಾಗಿ ಗ್ರಾಮದ ಜನರು ಪಂಚಾಯತಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಶಿವಾನಂದ ತೊಳಾನುರ ಹಾಗೂ ಕಾರ್ಯದರ್ಶಿ ನಿರಂಜನಪ್ಪ ದಳವಾಯಿ ಯಾವ ರೀತಿ ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯದಾಗಿದೆ. ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವರಾ ಇಲ್ಲವಾ ಕಾದು ನೋಡೋಣ.
ವರದಿ: ಸಂಗಪ್ಪ ಚಲವಾದಿ
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…