ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿಯ ಮುಂದಗಡೆ ಇರುವ ರಸ್ತೆಯ ದುಸ್ಥಿತಿ ಇದು.ಪ್ರತಿದಿನ ಗ್ರಾಮದ ಜನರು ಇದೇ ಪರಿಸ್ಥಿತಿ ಅನುಭವಿಸಬೇಕು. ಶಾಲೆಗೆ ವಿದ್ಯಾರ್ಥಿಗಳು ಹೋಗಲು ಹಾಗೂ ಗ್ರಾಮದ ಜನರು ಓಡಾಡಲು ಮುಖ್ಯರಸ್ತೆಯಾಗಿರುವ ಈ ರಸ್ತೆಯೇ ಈ ರೀತಿಯಾಗಿದ್ದು ಸುಮಾರು ದಿನಗಳಿಂದ ಇದೇ ಪರಿಸ್ಥಿತಿ ಅನುಭವಿಸುತಿದ್ದು. ಇದರ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸದೇ ಇರುವುದು ನಾಚಿಕೆ ಗೇಡಿನ ಸಂಗತಿ.ಗ್ರಾಮದಲ್ಲಿ ಪಂಚಾಯತಿ ಇದ್ದು ಇಲ್ಲದಂತಾಗಿದೆ. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು ಪರದಾಡುವ ಪರಿಸ್ಥಿತಿ ಎದುರಾಗಿದೆ. ದುರ್ವಾಸನೆಯಿಂದ ಸರಿಯಾಗಿ ದಿನಾಲೂ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುವ ಸಾದ್ಯತೆ ಹೆಚ್ಚಿದೆ. ಚರಂಡಿಗಳು ಇಲ್ಲದೆ ಇರುವ ಕಾರಣ ಗ್ರಾಮದ ಜನರ ಬಚ್ಚಲು ನೀರು ರಸ್ತೆಯ ಮೇಲೆಯೇ ಬಿಡುತ್ತಾರೆ. ಹಲವು ಬಾರಿ ಮೌಖಿಕವಾಗಿ ಗ್ರಾಮದ ಜನರು ಪಂಚಾಯತಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಶಿವಾನಂದ ತೊಳಾನುರ ಹಾಗೂ ಕಾರ್ಯದರ್ಶಿ ನಿರಂಜನಪ್ಪ ದಳವಾಯಿ ಯಾವ ರೀತಿ ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯದಾಗಿದೆ. ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವರಾ ಇಲ್ಲವಾ ಕಾದು ನೋಡೋಣ.
ವರದಿ: ಸಂಗಪ್ಪ ಚಲವಾದಿ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…