Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago