Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…

16 hours ago

ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…

16 hours ago

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಬೆಚ್ಚಿ ಬೀಳಿಸುವ ಕಥೆ ಹೇಳಿದ ಯುವತಿ..!

ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…

16 hours ago

ಚಲಿಸುತ್ತಿದ್ದ ರೈಲಿನಿಂದ ಮಗು ಬಿದ್ದು ದುರಂತ: ಚೈನ್ ಎಳೆದರೂ ನಿಲ್ಲದ ರೈಲು, ತಾಯಿಯ ಕಣ್ಣೀರಿನ ಅಳಲು

ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…

17 hours ago

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

22 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

22 hours ago