Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

12 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

12 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

15 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

15 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

15 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

15 hours ago