Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

5 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

5 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

5 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

5 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

5 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

5 hours ago