Latest

ಗ್ರಾಮ ಪಂಚಾಯಿತಿ ಸದಸ್ಯರಿಗೆ ಕ್ಯಾರೇ ಅನ್ನದ ಪಿಡಿಒ; ಲತಾಭಾಯಿ ವರ್ಗಾವಣೆಗೆ ಗ್ರಾ.ಪಂ ಸದಸ್ಯರ ಒತ್ತಾಯ.

ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯಿತಿ ಪಿಡಿಒ ಲತಾಭಾಯಿ ಯವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯಿತಿ ಒಟ್ಟು ೧೪ ಸದಸ್ಯರು ಕೂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಜನವರಿ ೨೬ ಶುಕ್ರವಾರದಂದು ಮನವಿ ನೀಡಿದ್ದಾರೆ.
ಪಿಡಿಒ ಯವರು ಸಾರ್ವಜನಿಕರಿಗೆ ಹಾಗೂ ಗ್ರಾ.ಪಂ ಸದಸ್ಯರಿಗೆ ಸರ್ಕಾರದಿಂದ ಬರುವ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ ಮಾಹಿತಿ ಕೇಳಿದರೆ ಕಾರಣವಿಲ್ಲದ ಮಾಹಿತಿ ನೀಡುತ್ತಾ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಈಗಾಗಿ ಈ ಭಾಗದ ಜನರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಾರದಲ್ಲಿ ಎರಡು ಅಥವಾ ಮೂರು ದಿನ ಮಾತ್ರ ಪಂಚಾಯಿತಿಗೆ ಬರುತ್ತಾರೆ ಬಂದರೂ ಕೂಡ ಗ್ರಾಮದ ಜನರ ಕೆಲಸಗಳನ್ನು ಮಾಡದೇ ತುಂಬಾನೇ ಸತಾಯಿಸುತ್ತಾರೆ ಇವರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ತಮಗೆ ಇಚ್ಛೆ ಬಂದಂತೆ ಅಧಿಕಾರ ಮಾಡಲು ಮುಂದಾಗುತ್ತಾರೆ ಇದರಿಂದಾಗಿ ಇಲ್ಲಿನ ಸಾರ್ವಜನಿಕರಿಗೆ ತುಂಬಾನೇ ಕಿರಿ ಕಿರಿ ಉಂಟಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಹೇಳಿರುತ್ತಾರೆ.
ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಅಭಿವೃದ್ಧಿಯ ಬಗ್ಗೆ ಮಾತನಾಡಲು ಮುಂದಾದಾಗ ಅವರಿಗೆ ಸರಿಯಾಗಿ ಪ್ರತಿಕ್ರಿಯಿಸದೆ ತಮಗೆ ಇಷ್ಟ ಬಂದಿರುವ ರೀತಿಯಲ್ಲಿ ಅಧಿಕಾರ ಚಲಾಯಿಸುತ್ತಾರೆ ಪ್ರತಿ ಬಾರಿಯೂ ಇವರ ಜೊತೆ ಚರ್ಚೆ ನಡೆಸಿದರು ಕೂಡ ಯಾವುದೇ ಪ್ರಯೋಜನ ವಾಗಿಲ್ಲ ನಮ್ಮ ಮಾತಿಗೂ ಕಿಂಚಿತ್ತು ಬೆಲೆ ಇಲ್ಲ ಅನ್ನುವ ಹಾಗೇ ವರ್ತಿಸುತ್ತಾರೆ ಇವರಿಂದಾಗಿ ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿಯ ಕೆಲಸಗಳು ನಡೆಯದಂತಾಗಿದೆ.
ಇಂತಹ ಅಧಿಕಾರಿಗಳಿಂದ ಗ್ರಾಮದಲ್ಲಿ ಸಾರ್ವಜನಿಕರಿಗೆ ಅನಾನುಕೂಲವೆ ವರೆತು ಅನುಕೂಲಗಳು ಒಂದು ಇಲ್ಲವಾಗಿದೆ ಎಂದು ಸದಸ್ಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಅಧಿಕಾರಿ ಇಂದ ಇಷ್ಟೆಲ್ಲ ಸಮಸ್ಯೆಗಳಾಗುತ್ತಿದ್ದು ಇಂತವರಿಂದ ಗ್ರಾಮದ ಅಭಿವೃದ್ಧಿ ಸಾಧ್ಯವಿಲ್ಲ ಆದಕಾರಣ ಇವರನ್ನು ವರ್ಗಾವಣೆ ಮಾಡಿ ಎಂದು ಗ್ರಾಮ ಪಂಚಾಯಿತಿಯ ೧೪ ಸದಸ್ಯರುಗಳು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

22 minutes ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago