Latest

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರು.!

ಮುಂಡಗೋಡ :ಪಟ್ಟಣದ ಟೌನ್ ಹಾಲ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 34.30 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಮತ್ತು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿದರು.
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆಯಿಂದ ಸಿಡ್ಲಗುಂಡಿ ಬ್ರಿಜ್ ವರೆಗೆ 22.50 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ನೂತನ ರಸ್ತೆ ನಿರ್ಮಾಣ, ಮುಂಡಗೋಡ ಪಟ್ಟಣದಿಂದ ಶಿಗ್ಗಾಂವಿ ಗಡಿಯವರೆಗೆ 6.80 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಯ ಅಗಲೀಕರಣ ಹಾಗೂ ನೂತನ ರಸ್ತೆ ನಿರ್ಮಾಣ,3 ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಬಾಚಣಿಕೆಯಲ್ಲಿ ನಿರ್ಮಾಣವಾದ ನೂತನ ಸರ್ಕ್ಯೂಟ್ ಹೌಸ್ ಉದ್ಘಾಟನೆ,2 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂಡಗೋಡ ಪಟ್ಟಣದಲ್ಲಿ ನೂತನ ಪರಿವೀಕ್ಷಣಾ ಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ಲೋಕೋಪಯೋಗಿ ಸಚಿವರಾದ ಸಿಸಿ ಪಾಟೀಲ್ ಹಾಗೂ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ನೆರವೇರಿಸಿದರು.
ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಲವು ಸವಾಲುಗಳನ್ನ ಎದುರಿಸಿದೆ. ಅತಿವೃಷ್ಟಿ, ಕೋವಿಡ್ ನಿಂದ ಸಾಕಷ್ಟು ಹಾನಿಯಾಯಿತು. ರಾಜ್ಯದ ಬೊಕ್ಕಸಕ್ಕೆ ಲಾಕ್ ಡೌನ್ ನಿಂದ ಹಣ ಬರದಂತಾಯಿತು. ನಂತರ ಸಿಎಂ ಆಗಿದ್ದ ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಿ ಎಲ್ಲವನ್ನೂ ಎದುರಿಸಿದ್ದಾರೆ. ರಾಜ್ಯಕ್ಕೆ ಸದ್ಯ ಸಂಪನ್ಮೂಲ ಹರಿದು ಬರುತ್ತಿದ್ದು ಅಭಿವೃದ್ದಿ ಕೆಲಸವನ್ನು ಇನ್ನೂ ಹೆಚ್ಚಾಗಿ ಮಾಡುತ್ತೇವೆ, ಅತಿವೃಷ್ಟಿಯಿಂದ ಉಂಟಾದ ಹಾನಿಗೆ ರಾಜ್ಯದಲ್ಲಿ ಅತೀ ಹೆಚ್ಚು ಅನುದಾನವನ್ನು ಲೋಕೋಪಯೋಗಿ ಇಲಾಖೆಯಿಂದ ಶಿವರಾಮ್ ಹೆಬ್ಬಾರ ಅವರು ಪಡೆದಿದ್ದಾರೆ ಎಂದರು.
ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ ಶಿಡ್ಲಗುಂಡಿಯಿಂದ ಮುಂಡಗೋಡಿಗೆ ಸುಮಾರು 22.50 ಕೋಟಿ ವೆಚ್ಚದಲ್ಲಿ ನೂತನ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದು ಶೀಘ್ರದಲ್ಲೇ ಕಾಮಗಾರಿ ಮುಕ್ತಾಯವಾಗಲಿದ್ದು ಜನರಿಗೆ ಇದರಿಂದ ಸಾಕಷ್ಟು ಉಪಯೋಗವಾಗಲಿದೆ ಎಂದರು.
ಕ್ಷೇತ್ರಕ್ಕೆ ನಾನು ಸಚಿವನಾದ ನಂತರ ರಸ್ತೆ ಕಾಮಗಾರಿಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣ ಬಂದಿದೆ. 119 ಕಾಲು ಸಂಕಗಳನ್ನ ಕ್ಷೇತ್ರಕ್ಕೆ ಲೋಕೋಪಯೋಗಿ ಇಲಾಖೆಯಿಂದ ನೀಡಲಾಗಿದೆ. ಗುಳ್ಳಾಪುರ ಸೇತುವೆ ಕುಸಿದಾಗ ಸ್ವತ: ಸಿಸಿ ಪಾಟೀಲ್ ನೋಡಿ ಸೇತುವೆ ನಿರ್ಮಾಣಕ್ಕೆ ಹಣ ನೀಡಿದ್ದಾರೆ. ಇದರಿಂದ ಯಲ್ಲಾಪುರ ಕ್ಷೇತ್ರದಲ್ಲಿ ಅಭಿವೃದ್ದಿ ಹೆಚ್ಚಾಗಲು ಕಾರಣವಾಗಿದೆ ಎಂದರು.
ಸರ್ಕಾರದ ಮೇಲೆ ಕೆಲವರು 40 ಪರ್ಸಂಟೆಜ್ ಆರೋಪ ಮಾಡುವವರು, ಯಾವುದೇ ಒಂದು ದಾಖಲೆಯನ್ನ ನೀಡಲಿ. ಕೇವಲ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡಬಾರದು. ಅವರ ಎಲ್ಲಾ ಸವಾಲುಗಳನ್ನ ಸ್ವೀಕರಿಸಲು ಬಿಜೆಪಿ ಸಿದ್ದವಿದೆ. ಎಲ್ಲಿಯ ವರೆಗೆ ಬಡವರ ಪರ ಕೆಲಸ ಮಾಡುತ್ತೇವೋ ಅಲ್ಲಿಯ ವರೆಗೆ ಜನರ ಆಶಿರ್ವಾದ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹಾವಣಗಿ,ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಲ್ ಟಿ ಪಾಟೀಲ್, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾದ ರವಿ ಗೌಡ ಪಾಟೀಲ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು, ತಹಸಿಲ್ದಾರ್ ಶಂಕರ್ ಗೌಡಿ, ಲೋಕೋಪಯೋಗಿ ಇಲಾಖೆಯ ಮುಂಡಗೋಡ ಉಪ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮಹದೇವಪ್ಪ ಹ್ಯಾಟಿ, ಪ್ರಮುಖರಾದ ಉಮೇಶ್ ಬಿಜಾಪುರ್, ಸಿದ್ದಪ್ಪ ಹಡಪದ, ಜಿ ಎಸ್ ಕಾತೂರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಮಹೇಶ್ ಹೊಸಕೊಪ್ಪ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು,ಮುಂತಾದವರು ಉಪಸ್ಥಿತರಿದ್ದರು.
ವರದಿ:ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

5 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

5 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

8 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

9 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

9 hours ago