Latest

ನನ್ನನ್ನು ಸಚಿವರ ಪಿ.ಎ ನಾದ್ರೂ ಮಾಡಿ ಎಂದು ಸಿ.ಎಂ ಗೆ ಪತ್ರ ಬರೆದ ಶಾಸಕ!

ಈ ಸರ್ಕಾರದಲ್ಲಿ ತಾವು ಹೇಳಿದ ಕೆಲಸ ಆಗುತ್ತಿಲ್ಲ ಎಂದು ರೋಸಿಹೋದ ಶಾಸಕರೊಬ್ಬರು, ‘ನನ್ನನ್ನು ಯಾವುದೇ ಸಚಿವರ ಪಿಎ, ವಿಶೇಷಾಧಿಕಾರಿ ಮಾಡಿಬಿಡಿ’ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪ್ರಸಂಗ ನಡೆದಿದೆ. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ಅನುದಾನ‌ ಕೊಡುತ್ತಿಲ್ಲ, ನಾವು ಹೇಳಿದವರಿಗೆ ವರ್ಗಾವಣೆ ಮಾಡುತ್ತಿಲ್ಲ ಎಂದು ಮೂವತ್ತಕ್ಕಿಂತ ಹೆಚ್ಚು ಶಾಸಕರು ಸಹಿ ಸಂಗ್ರಹಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಈ ವೇಳೆ ಸಹಿ ಸಂಗ್ರಹ ಹಾಗೂ ಪತ್ರದ ವಿಚಾರವೂ ಪ್ರಸ್ತಾಪವಾಯಿತು. ಕೆಲವು ಹಿರಿಯ ಶಾಸಕರು ಮಾಧ್ಯಮದ ಜತೆ ಅನೌಪಚಾರಿಕ ಚರ್ಚೆ ನಡೆಸುವಾಗ ತಮ್ಮನ್ನು ಸಚಿವರು ನಡೆಸಿಕೊಂಡ ರೀತಿ ಬಗ್ಗೆ ಸಂಕಟ ತೋಡಿಕೊಂಡರು. ಒಬ್ಬ ಶಾಸಕರು, ಶಾಸಕರು ಯಾವ ಮಟ್ಟಿಗೆ ರೋಸಿಹೋಗಿದ್ದಾರೆಂದು ದಾಖಲೆಯನ್ನು ಸಹ ತೋರಿಸಿದರು. ದಾವಣಗೆರೆ ಜಿಲ್ಲೆಯ ಕಿರಿಯ ಶಾಸಕರೊಬ್ಬರು ಸಿಎಂಗೆ ಬರೆದ ಪತ್ರ ಈ ವೇಳೆ ಗಮನಕ್ಕೆ ತಂದರು. ನಮ್ಮ ಯಾವುದೇ ಬೇಡಿಕೆಗೆ ಸರ್ಕಾರದಲ್ಲಿ ಸ್ಪಂದನೆ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಸಚಿವರ ಪಿಎ, ಒಎಸ್ ಡಿ ಮಾತಾದರೂ ನಡೆಯುತ್ತದೆ. ನನ್ನನ್ನು ಈ‌ ಕೆಲಸಕ್ಕೆ ನಿಯೋಜಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಪತ್ರ ಶಾಸಕರ ನಡುವೆ ಹರಿದಾಡಿದ್ದು, ನಗೆಯ ಬುಗ್ಗೆ ಉಮ್ಮಳಿಸಿದೆ. ‘ಶಿವ ಶಿವಾ…’ ಎಂದು ಪತ್ರ ಉಲ್ಲೇಖಿಸಿ ನಗೆಯಾಡಿದ್ದು ಜತೆಗೆ ಒಂದಿಬ್ಬರು ಸಚಿವರ ನಡವಳಿಕೆ ಬಗ್ಗೆ ತೀವ್ರತರ ಚರ್ಚೆ ಕೂಡ ಆಗಿದೆ.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

2 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

16 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

18 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago