Latest

ನನ್ನನ್ನು ಸಚಿವರ ಪಿ.ಎ ನಾದ್ರೂ ಮಾಡಿ ಎಂದು ಸಿ.ಎಂ ಗೆ ಪತ್ರ ಬರೆದ ಶಾಸಕ!

ಈ ಸರ್ಕಾರದಲ್ಲಿ ತಾವು ಹೇಳಿದ ಕೆಲಸ ಆಗುತ್ತಿಲ್ಲ ಎಂದು ರೋಸಿಹೋದ ಶಾಸಕರೊಬ್ಬರು, ‘ನನ್ನನ್ನು ಯಾವುದೇ ಸಚಿವರ ಪಿಎ, ವಿಶೇಷಾಧಿಕಾರಿ ಮಾಡಿಬಿಡಿ’ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪ್ರಸಂಗ ನಡೆದಿದೆ. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ಅನುದಾನ‌ ಕೊಡುತ್ತಿಲ್ಲ, ನಾವು ಹೇಳಿದವರಿಗೆ ವರ್ಗಾವಣೆ ಮಾಡುತ್ತಿಲ್ಲ ಎಂದು ಮೂವತ್ತಕ್ಕಿಂತ ಹೆಚ್ಚು ಶಾಸಕರು ಸಹಿ ಸಂಗ್ರಹಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಈ ವೇಳೆ ಸಹಿ ಸಂಗ್ರಹ ಹಾಗೂ ಪತ್ರದ ವಿಚಾರವೂ ಪ್ರಸ್ತಾಪವಾಯಿತು. ಕೆಲವು ಹಿರಿಯ ಶಾಸಕರು ಮಾಧ್ಯಮದ ಜತೆ ಅನೌಪಚಾರಿಕ ಚರ್ಚೆ ನಡೆಸುವಾಗ ತಮ್ಮನ್ನು ಸಚಿವರು ನಡೆಸಿಕೊಂಡ ರೀತಿ ಬಗ್ಗೆ ಸಂಕಟ ತೋಡಿಕೊಂಡರು. ಒಬ್ಬ ಶಾಸಕರು, ಶಾಸಕರು ಯಾವ ಮಟ್ಟಿಗೆ ರೋಸಿಹೋಗಿದ್ದಾರೆಂದು ದಾಖಲೆಯನ್ನು ಸಹ ತೋರಿಸಿದರು. ದಾವಣಗೆರೆ ಜಿಲ್ಲೆಯ ಕಿರಿಯ ಶಾಸಕರೊಬ್ಬರು ಸಿಎಂಗೆ ಬರೆದ ಪತ್ರ ಈ ವೇಳೆ ಗಮನಕ್ಕೆ ತಂದರು. ನಮ್ಮ ಯಾವುದೇ ಬೇಡಿಕೆಗೆ ಸರ್ಕಾರದಲ್ಲಿ ಸ್ಪಂದನೆ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಸಚಿವರ ಪಿಎ, ಒಎಸ್ ಡಿ ಮಾತಾದರೂ ನಡೆಯುತ್ತದೆ. ನನ್ನನ್ನು ಈ‌ ಕೆಲಸಕ್ಕೆ ನಿಯೋಜಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಪತ್ರ ಶಾಸಕರ ನಡುವೆ ಹರಿದಾಡಿದ್ದು, ನಗೆಯ ಬುಗ್ಗೆ ಉಮ್ಮಳಿಸಿದೆ. ‘ಶಿವ ಶಿವಾ…’ ಎಂದು ಪತ್ರ ಉಲ್ಲೇಖಿಸಿ ನಗೆಯಾಡಿದ್ದು ಜತೆಗೆ ಒಂದಿಬ್ಬರು ಸಚಿವರ ನಡವಳಿಕೆ ಬಗ್ಗೆ ತೀವ್ರತರ ಚರ್ಚೆ ಕೂಡ ಆಗಿದೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago