ಈ ಸರ್ಕಾರದಲ್ಲಿ ತಾವು ಹೇಳಿದ ಕೆಲಸ ಆಗುತ್ತಿಲ್ಲ ಎಂದು ರೋಸಿಹೋದ ಶಾಸಕರೊಬ್ಬರು, ‘ನನ್ನನ್ನು ಯಾವುದೇ ಸಚಿವರ ಪಿಎ, ವಿಶೇಷಾಧಿಕಾರಿ ಮಾಡಿಬಿಡಿ’ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪ್ರಸಂಗ ನಡೆದಿದೆ. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ಅನುದಾನ ಕೊಡುತ್ತಿಲ್ಲ, ನಾವು ಹೇಳಿದವರಿಗೆ ವರ್ಗಾವಣೆ ಮಾಡುತ್ತಿಲ್ಲ ಎಂದು ಮೂವತ್ತಕ್ಕಿಂತ ಹೆಚ್ಚು ಶಾಸಕರು ಸಹಿ ಸಂಗ್ರಹಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಈ ವೇಳೆ ಸಹಿ ಸಂಗ್ರಹ ಹಾಗೂ ಪತ್ರದ ವಿಚಾರವೂ ಪ್ರಸ್ತಾಪವಾಯಿತು. ಕೆಲವು ಹಿರಿಯ ಶಾಸಕರು ಮಾಧ್ಯಮದ ಜತೆ ಅನೌಪಚಾರಿಕ ಚರ್ಚೆ ನಡೆಸುವಾಗ ತಮ್ಮನ್ನು ಸಚಿವರು ನಡೆಸಿಕೊಂಡ ರೀತಿ ಬಗ್ಗೆ ಸಂಕಟ ತೋಡಿಕೊಂಡರು. ಒಬ್ಬ ಶಾಸಕರು, ಶಾಸಕರು ಯಾವ ಮಟ್ಟಿಗೆ ರೋಸಿಹೋಗಿದ್ದಾರೆಂದು ದಾಖಲೆಯನ್ನು ಸಹ ತೋರಿಸಿದರು. ದಾವಣಗೆರೆ ಜಿಲ್ಲೆಯ ಕಿರಿಯ ಶಾಸಕರೊಬ್ಬರು ಸಿಎಂಗೆ ಬರೆದ ಪತ್ರ ಈ ವೇಳೆ ಗಮನಕ್ಕೆ ತಂದರು. ನಮ್ಮ ಯಾವುದೇ ಬೇಡಿಕೆಗೆ ಸರ್ಕಾರದಲ್ಲಿ ಸ್ಪಂದನೆ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಸಚಿವರ ಪಿಎ, ಒಎಸ್ ಡಿ ಮಾತಾದರೂ ನಡೆಯುತ್ತದೆ. ನನ್ನನ್ನು ಈ ಕೆಲಸಕ್ಕೆ ನಿಯೋಜಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಪತ್ರ ಶಾಸಕರ ನಡುವೆ ಹರಿದಾಡಿದ್ದು, ನಗೆಯ ಬುಗ್ಗೆ ಉಮ್ಮಳಿಸಿದೆ. ‘ಶಿವ ಶಿವಾ…’ ಎಂದು ಪತ್ರ ಉಲ್ಲೇಖಿಸಿ ನಗೆಯಾಡಿದ್ದು ಜತೆಗೆ ಒಂದಿಬ್ಬರು ಸಚಿವರ ನಡವಳಿಕೆ ಬಗ್ಗೆ ತೀವ್ರತರ ಚರ್ಚೆ ಕೂಡ ಆಗಿದೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…