Latest

ನನ್ನನ್ನು ಸಚಿವರ ಪಿ.ಎ ನಾದ್ರೂ ಮಾಡಿ ಎಂದು ಸಿ.ಎಂ ಗೆ ಪತ್ರ ಬರೆದ ಶಾಸಕ!

ಈ ಸರ್ಕಾರದಲ್ಲಿ ತಾವು ಹೇಳಿದ ಕೆಲಸ ಆಗುತ್ತಿಲ್ಲ ಎಂದು ರೋಸಿಹೋದ ಶಾಸಕರೊಬ್ಬರು, ‘ನನ್ನನ್ನು ಯಾವುದೇ ಸಚಿವರ ಪಿಎ, ವಿಶೇಷಾಧಿಕಾರಿ ಮಾಡಿಬಿಡಿ’ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪ್ರಸಂಗ ನಡೆದಿದೆ. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ಅನುದಾನ‌ ಕೊಡುತ್ತಿಲ್ಲ, ನಾವು ಹೇಳಿದವರಿಗೆ ವರ್ಗಾವಣೆ ಮಾಡುತ್ತಿಲ್ಲ ಎಂದು ಮೂವತ್ತಕ್ಕಿಂತ ಹೆಚ್ಚು ಶಾಸಕರು ಸಹಿ ಸಂಗ್ರಹಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಈ ವೇಳೆ ಸಹಿ ಸಂಗ್ರಹ ಹಾಗೂ ಪತ್ರದ ವಿಚಾರವೂ ಪ್ರಸ್ತಾಪವಾಯಿತು. ಕೆಲವು ಹಿರಿಯ ಶಾಸಕರು ಮಾಧ್ಯಮದ ಜತೆ ಅನೌಪಚಾರಿಕ ಚರ್ಚೆ ನಡೆಸುವಾಗ ತಮ್ಮನ್ನು ಸಚಿವರು ನಡೆಸಿಕೊಂಡ ರೀತಿ ಬಗ್ಗೆ ಸಂಕಟ ತೋಡಿಕೊಂಡರು. ಒಬ್ಬ ಶಾಸಕರು, ಶಾಸಕರು ಯಾವ ಮಟ್ಟಿಗೆ ರೋಸಿಹೋಗಿದ್ದಾರೆಂದು ದಾಖಲೆಯನ್ನು ಸಹ ತೋರಿಸಿದರು. ದಾವಣಗೆರೆ ಜಿಲ್ಲೆಯ ಕಿರಿಯ ಶಾಸಕರೊಬ್ಬರು ಸಿಎಂಗೆ ಬರೆದ ಪತ್ರ ಈ ವೇಳೆ ಗಮನಕ್ಕೆ ತಂದರು. ನಮ್ಮ ಯಾವುದೇ ಬೇಡಿಕೆಗೆ ಸರ್ಕಾರದಲ್ಲಿ ಸ್ಪಂದನೆ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಸಚಿವರ ಪಿಎ, ಒಎಸ್ ಡಿ ಮಾತಾದರೂ ನಡೆಯುತ್ತದೆ. ನನ್ನನ್ನು ಈ‌ ಕೆಲಸಕ್ಕೆ ನಿಯೋಜಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಪತ್ರ ಶಾಸಕರ ನಡುವೆ ಹರಿದಾಡಿದ್ದು, ನಗೆಯ ಬುಗ್ಗೆ ಉಮ್ಮಳಿಸಿದೆ. ‘ಶಿವ ಶಿವಾ…’ ಎಂದು ಪತ್ರ ಉಲ್ಲೇಖಿಸಿ ನಗೆಯಾಡಿದ್ದು ಜತೆಗೆ ಒಂದಿಬ್ಬರು ಸಚಿವರ ನಡವಳಿಕೆ ಬಗ್ಗೆ ತೀವ್ರತರ ಚರ್ಚೆ ಕೂಡ ಆಗಿದೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

6 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

6 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

6 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

6 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

6 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

11 hours ago