Latest

ಕ್ಯಾಪ್ಟನ್ ಕೂಲ್” ಎಂಬ ಹೆಸರು ಈಗ ಧೋನಿಗೆ ಮಾತ್ರ.! ಟ್ರೇಡ್‌ಮಾರ್ಕ್ ಮಂಜೂರು.

ಕ್ರಿಕೆಟ್ ಅಭಿಮಾನಿಗಳು “ಕ್ಯಾಪ್ಟನ್ ಕೂಲ್” ಎಂದು ಪ್ರೀತಿಯಿಂದ ಕರೆಯುವ ಮಹೇಂದ್ರ ಸಿಂಗ್ ಧೋನಿ, ಇದೀಗ ತಮ್ಮ ಈ ಪ್ರಸಿದ್ಧ ಅಡ್ಡಹೆಸರನ್ನು ಕಾನೂನು ಬದ್ಧವಾಗಿ ತನ್ನದಾಗಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಮೈದಾನದಲ್ಲಿ ತಾಳ್ಮೆ, ಶಾಂತಿ ಹಾಗೂ ಷಾಟ್ ತೀರ್ಮಾನಗಳಿಂದ ದಿಟ್ಟ ನಾಯಕತ್ವ ತೋರಿಸಿದ್ದ ಧೋನಿಗೆ ಈ ಬಿರುದು ತಮ್ಮದೇ ಆದ ವೈಯಕ್ತಿಕ ಗುರುತಾಗಿ ಪರಿಣಮಿಸಿದ್ದು, ಇದೀಗ ಅದನ್ನು ಅಧಿಕೃತವಾಗಿ ಟ್ರೇಡ್‌ಮಾರ್ಕ್ ಆಗಿ ನೋಂದಾಯಿಸಲು ಮೊದಲ ಹೆಜ್ಜೆ ಇಟ್ಟಿದ್ದಾರೆ.

ಜೂನ್ 16, 2025ರಂದು ಟ್ರೇಡ್‌ಮಾರ್ಕ್ ಜರ್ನಲ್‌ನಲ್ಲಿ ಧೋನಿಯ “ಕ್ಯಾಪ್ಟನ್ ಕೂಲ್” ಅರ್ಜಿಯ ಪ್ರಕಟಣೆ ನಡೆಯಿತು. ಟ್ರೇಡ್‌ಮಾರ್ಕ್ ಪೋರ್ಟಲ್ ಈ ಅರ್ಜಿಯನ್ನು ಮಂಜೂರಾಗಿಸಿದ್ದು, ಈ ಹೆಸರನ್ನು ಇನ್ನು ಮುಂದೆ ಧೋನಿ ಹೊರತುಪಡಿಸಿ ಯಾರು ಬಳಸಲು ಸಾಧ್ಯವಿಲ್ಲ.

ಆದರೆ ಈ ಅರ್ಜಿ ಮೊದಲ ಬಾರಿಗೆ ಸಲ್ಲಿಸಿದಾಗಲೇ, ಇದಕ್ಕೆ ವಿರೋಧದ ಧ್ವನಿ ಕೇಳಿಬಂದಿತ್ತು. ಟ್ರೇಡ್‌ಮಾರ್ಕ್ಸ್ ಕಾಯ್ದೆಯ ಸೆಕ್ಷನ್ 11(1) ಅಡಿಯಲ್ಲಿ ಈ ಹೆಸರಿನಂತೆ ಇದ್ದ ಗುರುತುಗಳು ಜನರಲ್ಲಿ ಗೊಂದಲ ಉಂಟುಮಾಡಬಹುದು ಎಂಬ ಆಕ್ಷೇಪಣೆ ವ್ಯಕ್ತವಾಗಿತ್ತು. ಆದರೆ ಧೋನಿ ಪರ ವಕೀಲರು ಮಂಡಿಸಿದ ಅರ್ಥಪೂರ್ಣ ವಾದಗಳು ನಿರ್ಣಾಯಕವಾದವು.

ವಕೀಲರ ಪ್ರಕಾರ, “ಕ್ಯಾಪ್ಟನ್ ಕೂಲ್” ಎಂಬ ಪದ ಧೋನಿಯ ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದ ಅವಿಭಾಜ್ಯ ಭಾಗವಾಗಿದೆ. ಕ್ರಿಕೆಟ್ ಅಭಿಮಾನಿಗಳು, ಮಾಧ್ಯಮಗಳು ಈ ಪದವನ್ನು ವರ್ಷಗಳಿನಿಂದ ಧೋನಿಗೆ ಸಾಂಕೇತಿಕವಾಗಿ ಬಳಸುತ್ತಿದ್ದು, ಇದು ಇತರರಿಗಿಂತ ಧೋನಿಗೆ ವಿಶಿಷ್ಟವಾದ ಸಂಬಂಧವನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದರು.

ಈ ವಾದಗಳನ್ನು ಪರಿಗಣಿಸಿದ ಟ್ರೇಡ್‌ಮಾರ್ಕ್ ಅಧಿಕಾರಿಗಳು ಧೋನಿಗೆ ಈ ಹೆಸರನ್ನು ಟ್ರೇಡ್‌ಮಾರ್ಕ್ ರೂಪದಲ್ಲಿ ಮಂಜೂರು ಮಾಡಿದ್ದಾರೆ. ಇದೀಗ ಧೋನಿಗೆ ಮಾತ್ರ ಈ ಬಿರುದನ್ನು ಬಳಸುವ ಕಾನೂನು ಹಕ್ಕು ಲಭಿಸಿದೆ.

ಇದಾದ ಮೇಲೆ, ಧೋನಿಯ ಈ ಹೆಸರನ್ನು ಕಮರ್ಶಿಯಲ್ ಗಾಗಿ ಬಳಸಲು ಇತರರು ಮುಂದೆ ಬರುವುದು ಕಠಿಣ. ಅವರು ಅನಧಿಕೃತವಾಗಿ ಈ ಹೆಸರನ್ನು ಉಪಯೋಗಿಸಿದರೆ, ಕಾನೂನು ಕ್ರಮ ಎದುರಿಸಲು ಸಿದ್ಧರಾಗಬೇಕಾಗುತ್ತದೆ.

nazeer ahamad

Recent Posts

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

53 minutes ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

55 minutes ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

56 minutes ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

20 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

1 day ago