ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ವ್ಲಾಗರ್ ಮತ್ತು ಆಕೆಯ ಪತಿ, ಹನಿಟ್ರ್ಯಾಪ್ ಪ್ರಕರಣದಡಿ ಕೇರಳದ ಕಲ್ಪಕಂಚೇರಿ ಪೊಲೀಸರಿಂದ ಬಂಧನವಾಗಿದ್ದಾರೆ. 68 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್ ಬಲಗೆ ಬೀಳಿಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ವ್ಲಾಗರ್ ರಶೀದಾ (28) ಮತ್ತು ಆಕೆಯ ಪತಿ ನಿಶಾದ್ ಬಂಧಿತ ಆರೋಪಿಗಳು. ಇಬ್ಬರು ಕೂಡ ತ್ರಿಸ್ಸೂರ್ನ ಕುನ್ನಮಕುಲಮ್ ಮೂಲದವರು. ವ್ಲಾಗರ್ ಆಗಿರುವ ರಶೀದಾ ಕಣ್ಣುಕುಕ್ಕುವಂತಹ ಉಡುಗೆ ತೊಟ್ಟು ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಡುತ್ತಿದ್ದಳು. ಈಕೆಯ ವಿಡಿಯೋ ನೋಡಿಯೇ ಆಕೆಯ ಹನಿಟ್ರ್ಯಾಪ್ ಬಲೆಗೆ 68 ವರ್ಷದ ವೃದ್ಧ ಬಿದ್ದಿದ್ದ. ಆತನಿಗೆ 23 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು ದಂಪತಿ ವಿರುದ್ಧದ ಪ್ರಕರಣ ದಾಖಲಾಗಿತ್ತು.
ಕಿಲಾಡಿ ಲೇಡಿ ರಶೀದಾ ಕಲ್ಪಕಂಚೇರಿಯಲ್ಲಿ ಅತ್ಯಂತ ಪ್ರಭಾವಿ ಸ್ಥಳೀಯರೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದಳು. ಪ್ರೀತಿಯ ನೆಪ ಮಾಡಿ ಒಮ್ಮೊಮ್ಮೆ ಮನೆಗೆ ಕರೆಸಿ ಹತ್ತಿರವಾಗುತ್ತಿದ್ದಳು. ಆಕೆಯ ವಿಡಿಯೋ ನೋಡಿದವರು ಸುಲಭವಾಗಿ ಆಕೆಯ ಬಲೆಗೆ ಬೀಳುತ್ತಿದ್ದರು. ಹನಿಟ್ರ್ಯಾಪ್ ಮಾಡಲು ಆಕೆಯ ಪತಿ ನಿಶಾದ್ ಎಲ್ಲ ವ್ಯವಸ್ಥೆಯನ್ನು ಮಾಡುತ್ತಿದ್ದ. 68 ವರ್ಷದ ಸಂತ್ರಸ್ತನನ್ನು ಪರಿಚಯಿಸಿಕೊಂಡಿದ್ದ ರಶೀದಾ, ಆಗಾಗ ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದಳು. ಒಂದು ದಿನ ಪತಿಗೆ ಬಿಸಿನೆಸ್ ಮಾಡಲು ಹಣ ಬೇಕು ಎಂದು ಕೇಳಿದ್ದಳು.
ರಶೀದಾ ಮಾತು ನಂಬಿ ಸಂತ್ರಸ್ತ ಆಕೆಗೆ ಹಣ ನೀಡಿದ್ದನು. ಕೆಲವು ದಿನಗಳ ಬಳಿಕ ಹಣ ವಾಪಸ್ ಕೇಳಿದಾಗ ತಮ್ಮಿಬ್ಬರ ನಡುವಿನ ಸಂಬಂಧವನ್ನು ಬಹಿರಂಗಗೊಳಿಸುವುದಾಗಿ ಬೆದರಿಕೆ ಹಾಕಿದ್ದಳು. ಯಾವಾಗ ಸಂತ್ರಸ್ತನ ಮನೆಯವರಿಗೆ ಹನಿಟ್ರ್ಯಾಪ್ನಿಂದ ಹಣ ಕಳೆದುಕೊಂಡಿರುವ ವಿಚಾರ ಗೊತ್ತಾಯಿತೋ ಅವರು ತಕ್ಷಣ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ರಶೀದಾ ಮತ್ತು ಆಕೆಯ ಗಂಡನನ್ನು ಕಲ್ಪಕಂಚೇರಿ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…