Latest

ಈಕೆಯ ಮೋಹದ ಜಾಲಕ್ಕೆ ಬಿದ್ದ ವೃದ್ಧ ಕಳೆದುಕೊಂಡ 23 ಲಕ್ಷ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್​​ ಮಾಡುವ ವ್ಲಾಗರ್​ ಮತ್ತು ಆಕೆಯ ಪತಿ, ಹನಿಟ್ರ್ಯಾಪ್​ ಪ್ರಕರಣದಡಿ ಕೇರಳದ ಕಲ್ಪಕಂಚೇರಿ ಪೊಲೀಸರಿಂದ ಬಂಧನವಾಗಿದ್ದಾರೆ. 68 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್​ ಬಲಗೆ ಬೀಳಿಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ವ್ಲಾಗರ್​ ರಶೀದಾ (28) ಮತ್ತು ಆಕೆಯ ಪತಿ ನಿಶಾದ್​ ಬಂಧಿತ ಆರೋಪಿಗಳು. ಇಬ್ಬರು ಕೂಡ ತ್ರಿಸ್ಸೂರ್​ನ ಕುನ್ನಮಕುಲಮ್​ ಮೂಲದವರು. ವ್ಲಾಗರ್​ ಆಗಿರುವ ರಶೀದಾ ಕಣ್ಣುಕುಕ್ಕುವಂತಹ ಉಡುಗೆ ತೊಟ್ಟು ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಡುತ್ತಿದ್ದಳು. ಈಕೆಯ ವಿಡಿಯೋ ನೋಡಿಯೇ ಆಕೆಯ ಹನಿಟ್ರ್ಯಾಪ್​ ಬಲೆಗೆ 68 ವರ್ಷದ ವೃದ್ಧ ಬಿದ್ದಿದ್ದ. ಆತನಿಗೆ 23 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು ದಂಪತಿ ವಿರುದ್ಧದ ಪ್ರಕರಣ ದಾಖಲಾಗಿತ್ತು.
ಕಿಲಾಡಿ ಲೇಡಿ ರಶೀದಾ ಕಲ್ಪಕಂಚೇರಿಯಲ್ಲಿ ಅತ್ಯಂತ ಪ್ರಭಾವಿ ಸ್ಥಳೀಯರೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದಳು. ಪ್ರೀತಿಯ ನೆಪ ಮಾಡಿ ಒಮ್ಮೊಮ್ಮೆ ಮನೆಗೆ ಕರೆಸಿ ಹತ್ತಿರವಾಗುತ್ತಿದ್ದಳು. ಆಕೆಯ ವಿಡಿಯೋ ನೋಡಿದವರು ಸುಲಭವಾಗಿ ಆಕೆಯ ಬಲೆಗೆ ಬೀಳುತ್ತಿದ್ದರು. ಹನಿಟ್ರ್ಯಾಪ್​ ಮಾಡಲು ಆಕೆಯ ಪತಿ ನಿಶಾದ್ ಎಲ್ಲ ವ್ಯವಸ್ಥೆಯನ್ನು ಮಾಡುತ್ತಿದ್ದ. 68 ವರ್ಷದ ಸಂತ್ರಸ್ತನನ್ನು ಪರಿಚಯಿಸಿಕೊಂಡಿದ್ದ ರಶೀದಾ, ಆಗಾಗ ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದಳು. ಒಂದು ದಿನ ಪತಿಗೆ ಬಿಸಿನೆಸ್​ ಮಾಡಲು ಹಣ ಬೇಕು ಎಂದು ಕೇಳಿದ್ದಳು.
ರಶೀದಾ ಮಾತು ನಂಬಿ ಸಂತ್ರಸ್ತ ಆಕೆಗೆ ಹಣ ನೀಡಿದ್ದನು. ಕೆಲವು ದಿನಗಳ ಬಳಿಕ ಹಣ ವಾಪಸ್​ ಕೇಳಿದಾಗ ತಮ್ಮಿಬ್ಬರ ನಡುವಿನ ಸಂಬಂಧವನ್ನು ಬಹಿರಂಗಗೊಳಿಸುವುದಾಗಿ ಬೆದರಿಕೆ ಹಾಕಿದ್ದಳು. ಯಾವಾಗ ಸಂತ್ರಸ್ತನ ಮನೆಯವರಿಗೆ ಹನಿಟ್ರ್ಯಾಪ್​ನಿಂದ ಹಣ ಕಳೆದುಕೊಂಡಿರುವ ವಿಚಾರ ಗೊತ್ತಾಯಿತೋ ಅವರು ತಕ್ಷಣ ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ರಶೀದಾ ಮತ್ತು ಆಕೆಯ ಗಂಡನನ್ನು ಕಲ್ಪಕಂಚೇರಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

3 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

3 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

3 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

3 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

3 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

3 hours ago