ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದಲಿತ ಕುಟುಂಬಗಳ ಮನೆಗಳಿಗೆ ನೀರು ನುಗ್ಗಿದರಿಂದ ದಲಿತ ಸಮುದಾಯದ ಜನರಿಗೆ ವಾಸಿಸಲು ಸರಿಯಾದ ವ್ಯವಸ್ತೆ ಇಲ್ಲದಿರುವುದರಿಂದ ಗುಡಿಗಳಲ್ಲಿ ವಾಸ ಮಾಡಿ ಜನರು ಬೇಸತ್ತು ಇಂದು ಮುಧೋಳ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಆಡಳಿತ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯರಾದ
ತಿಮ್ಮಣ್ಣ ಬಟಕುರ್ಕಿ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ತಾಲೂಕ ಆಡಳಿತ ಅಧಿಕಾರಿಗಳು ಯಾವುದೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡದೆ ದಲಿತ ಸಮುದಾಯದ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಆದಕಾರಣ ನಮ್ಮ ಗ್ರಾಮದ ಎಲ್ಲಾ ದಲಿತ ಕುಟುಂಬದ ಜನರಿಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಧೋಳ ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ವಿನೋದ್ ಹತ್ತಳ್ಳಿ ರವರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅಧಿಕಾರಿಗಳಾದ ಮೋಹನ್ ಕೋರಡ್ಡಿ ರವರು ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ್ ಘೋರ್ಪಡೆ ರವರು ಕೂಡಿಕೊಂಡು ಜನರಿಗೆ ನಾವು ನಿಮಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡುತ್ತೇವೆ ಹೋರಾಟ ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುವುದರ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರಿಂದ ಎಲ್ಲಾ ಜನ ಹೋರಾಟ ಕೈಬಿಡಲು ಮುಂದಾದರೂ.
ವರದಿ:- ಆಶೋಕ ಗುರಕೇರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…