ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದಲಿತ ಕುಟುಂಬಗಳ ಮನೆಗಳಿಗೆ ನೀರು ನುಗ್ಗಿದರಿಂದ ದಲಿತ ಸಮುದಾಯದ ಜನರಿಗೆ ವಾಸಿಸಲು ಸರಿಯಾದ ವ್ಯವಸ್ತೆ ಇಲ್ಲದಿರುವುದರಿಂದ ಗುಡಿಗಳಲ್ಲಿ ವಾಸ ಮಾಡಿ ಜನರು ಬೇಸತ್ತು ಇಂದು ಮುಧೋಳ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಆಡಳಿತ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯರಾದ
ತಿಮ್ಮಣ್ಣ ಬಟಕುರ್ಕಿ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ತಾಲೂಕ ಆಡಳಿತ ಅಧಿಕಾರಿಗಳು ಯಾವುದೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡದೆ ದಲಿತ ಸಮುದಾಯದ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಆದಕಾರಣ ನಮ್ಮ ಗ್ರಾಮದ ಎಲ್ಲಾ ದಲಿತ ಕುಟುಂಬದ ಜನರಿಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಧೋಳ ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ವಿನೋದ್ ಹತ್ತಳ್ಳಿ ರವರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅಧಿಕಾರಿಗಳಾದ ಮೋಹನ್ ಕೋರಡ್ಡಿ ರವರು ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ್ ಘೋರ್ಪಡೆ ರವರು ಕೂಡಿಕೊಂಡು ಜನರಿಗೆ ನಾವು ನಿಮಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡುತ್ತೇವೆ ಹೋರಾಟ ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುವುದರ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರಿಂದ ಎಲ್ಲಾ ಜನ ಹೋರಾಟ ಕೈಬಿಡಲು ಮುಂದಾದರೂ.
ವರದಿ:- ಆಶೋಕ ಗುರಕೇರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…