ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ ಬಹುಮಾನದ ದುಡ್ಡಿಗೆ ರಕ್ಷಣೆ ಕೊಡುವಂತೆ ಕೋರಿಕೊಂಡಿದ್ದಾರೆ. ತನಗೆ ಲಾಟರಿ ದುಡ್ಡನ್ನು ಪಡೆಯುವ ಬಗ್ಗೆ ತಿಳಿಯದೆ ಹಾಗೂ ಬಹುಮಾನದ ದುಡ್ಡನ್ನು ಯಾರಾದರೂ ಕದ್ದುಬಿಡುವ ಭಯದ ಕಾರಣದಿಂದ ಪೊಲೀಸರ ಬಳಿ ಹೀಗೆ ಓಡಿ ಹೋಗಿದ್ದಾರೆ ಬಡೇಶ್.
ಬಡೇಶ್ಗೆ ಈ ಸಂಬಂಧ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರಣೆ ಕೊಟ್ಟ ಕೇರಳ ಪೊಲೀಸರು ಬಹುಮಾನದ ಹಣಕ್ಕೆ ಭದ್ರತೆ ಕೊಡುವುದಾಗಿ ಮಾತು ನೀಡಿದ್ದಾರೆ. ಎರ್ನಾಕುಳಂನ ಚೊಟ್ಟನಿಕಾರಾ ಎಂಬಲ್ಲಿ ರಸ್ತೆ ನಿರ್ಮಾಣದಲ್ಲಿ ಬ್ಯುಸಿಯಾಗಿರುವ ಬಡೇಶ್, ಅನೇಕ ವರ್ಷಗಳಿಂದ ಕೇರಳದಲ್ಲಿ ವಾಸಿಸುತ್ತಿದ್ದಾರೆ. ಈ ಬಹುಮಾನದ ದುಡ್ಡು ಬರುತ್ತಲೇ ತಮ್ಮೂರಿಗೆ ಹೋಗಿ ತಮ್ಮ ಜಮೀನಿನಲ್ಲಿ ವ್ಯವಸಾಯದಲ್ಲಿ ತೊಡಗಲು ನಿರ್ಧರಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…