ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ ಬಹುಮಾನದ ದುಡ್ಡಿಗೆ ರಕ್ಷಣೆ ಕೊಡುವಂತೆ ಕೋರಿಕೊಂಡಿದ್ದಾರೆ. ತನಗೆ ಲಾಟರಿ ದುಡ್ಡನ್ನು ಪಡೆಯುವ ಬಗ್ಗೆ ತಿಳಿಯದೆ ಹಾಗೂ ಬಹುಮಾನದ ದುಡ್ಡನ್ನು ಯಾರಾದರೂ ಕದ್ದುಬಿಡುವ ಭಯದ ಕಾರಣದಿಂದ ಪೊಲೀಸರ ಬಳಿ ಹೀಗೆ ಓಡಿ ಹೋಗಿದ್ದಾರೆ ಬಡೇಶ್.
ಬಡೇಶ್ಗೆ ಈ ಸಂಬಂಧ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರಣೆ ಕೊಟ್ಟ ಕೇರಳ ಪೊಲೀಸರು ಬಹುಮಾನದ ಹಣಕ್ಕೆ ಭದ್ರತೆ ಕೊಡುವುದಾಗಿ ಮಾತು ನೀಡಿದ್ದಾರೆ. ಎರ್ನಾಕುಳಂನ ಚೊಟ್ಟನಿಕಾರಾ ಎಂಬಲ್ಲಿ ರಸ್ತೆ ನಿರ್ಮಾಣದಲ್ಲಿ ಬ್ಯುಸಿಯಾಗಿರುವ ಬಡೇಶ್, ಅನೇಕ ವರ್ಷಗಳಿಂದ ಕೇರಳದಲ್ಲಿ ವಾಸಿಸುತ್ತಿದ್ದಾರೆ. ಈ ಬಹುಮಾನದ ದುಡ್ಡು ಬರುತ್ತಲೇ ತಮ್ಮೂರಿಗೆ ಹೋಗಿ ತಮ್ಮ ಜಮೀನಿನಲ್ಲಿ ವ್ಯವಸಾಯದಲ್ಲಿ ತೊಡಗಲು ನಿರ್ಧರಿಸಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…