Latest

ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು!

ಮುಂಡಗೋಡ: ಅಡಿಕೆ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿ ಆತನಿಂದ ಎರಡುವರೆ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹಾಗೂ ಅಶೋಕ ಲೈಲ್ಯಾಂಡ್ ವಾಹನ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೊಪ್ಪ ಇಂದಿರಾನಗರ ಗ್ರಾಮದ ಪಕ್ಕಿರೇಶ ದೊಡ್ಮನಿ ಬಂಧಿತ ಆರೋಪಿಯಾಗಿದ್ದಾನೆ.
ಈತನು ರಮೇಶ ಕಾಮತ್ ಹಾಗೂ ನವೀನ ಹುದ್ಲಮನಿ ಅವರ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದಾನೆ. ಘಟನೆಯ ವಿವರ:ಪಕ್ಕಿರೇಶ ದೊಡ್ಮನಿ ಇವನು ಜುಲೈ 26 ರಂದು ಹಳೂರ ಓಣಿಯಲ್ಲಿರುವ ತೋಟಗಳಲ್ಲಿಯ ಮನೆಯಲ್ಲಿದ್ದ ರಮೇಶ ಕಾಮತ್ ಹಾಗೂ ನವೀನ್ ಹುದ್ಲಮನಿ ಅವರ ಅಡಿಕೆಯನ್ನು ಕಳ್ಳತನ ಮಾಡಿ ಆ ಅಡಿಕೆಯನ್ನು ರಸ್ತೆ ಬದಿಗೆ ತಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಮನೆಗೆ ಸಾಗಿಸಿದ್ದಾನೆ ನಂತರ ಎರಡು ಮೂರು ದಿನಗಳ ನಂತರ ಯಲ್ಲಾಪುರ ತಾಲೂಕಿನ ಗಣೇಶ ಪ್ರಸಾದ್ ಟ್ರೇಡರ್ಸ ಅವರಿಗೆ ಮಾರಾಟ ಮಾಡಿ ಬಂದ ಹಣದಿಂದ ೮೦ ಸಾವಿರ ನೀಡಿ ಹೊಸ ಟಾಟಾ ಎಸ್ ವಾಹನ ಖರೀದಿ ಮಾಡಿದ್ದಾನೆ.ಪೈನಾನ್ಸನಲ್ಲಿ ಕಂತು ಮೂಲಕ ಸಾಲಮಾಡಿ ವಾಹನ ಖರೀದಿ ಮಾಡಿರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಬಾಯಿ ಬಿಟ್ಟಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ಹೆಚ್ಚುವರಿ ಎಸ್.ಪಿ ಎಸ್ ಬದರಿನಾಥ, ಡಿ.ವಾಯ್.ಎಸ್.ಪಿ ರವಿ ನಾಯ್ಕ, ಸಿ.ಪಿ.ಐ ಸಿದ್ದಪ್ಪ ಸಿಮಾನಿ ಅವರ ನೇತ್ರತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ಕೈ ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ‌.ಎಸ್.ಐ ಬಸವರಾಜ್ ಮಬನೂರ, ಎನ್. ಡಿ. ಜಕ್ಲಣ್ಣನವರ ಹಾಗೂ ಮಣಿಮಾಲನ್ ಮೆಸ್ತಾ, ಸಲೀಮ, ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ್ ಲಮಾಣಿ, ವಿವೇಕ್ ಪಟಗಾರ, ಸಹದೇವ, ಶರತ್ ದೇವಳ್ಳಿ ಇವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ಪ್ರಶಂಸಿಸಿ ಸಾಧನೆ ವ್ಯಕ್ತಪಡಿಸಿದ್ದಾರೆ
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago