ಮುಂಡಗೋಡ: ಅಡಿಕೆ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿ ಆತನಿಂದ ಎರಡುವರೆ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹಾಗೂ ಅಶೋಕ ಲೈಲ್ಯಾಂಡ್ ವಾಹನ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೊಪ್ಪ ಇಂದಿರಾನಗರ ಗ್ರಾಮದ ಪಕ್ಕಿರೇಶ ದೊಡ್ಮನಿ ಬಂಧಿತ ಆರೋಪಿಯಾಗಿದ್ದಾನೆ.
ಈತನು ರಮೇಶ ಕಾಮತ್ ಹಾಗೂ ನವೀನ ಹುದ್ಲಮನಿ ಅವರ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದಾನೆ. ಘಟನೆಯ ವಿವರ:ಪಕ್ಕಿರೇಶ ದೊಡ್ಮನಿ ಇವನು ಜುಲೈ 26 ರಂದು ಹಳೂರ ಓಣಿಯಲ್ಲಿರುವ ತೋಟಗಳಲ್ಲಿಯ ಮನೆಯಲ್ಲಿದ್ದ ರಮೇಶ ಕಾಮತ್ ಹಾಗೂ ನವೀನ್ ಹುದ್ಲಮನಿ ಅವರ ಅಡಿಕೆಯನ್ನು ಕಳ್ಳತನ ಮಾಡಿ ಆ ಅಡಿಕೆಯನ್ನು ರಸ್ತೆ ಬದಿಗೆ ತಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಮನೆಗೆ ಸಾಗಿಸಿದ್ದಾನೆ ನಂತರ ಎರಡು ಮೂರು ದಿನಗಳ ನಂತರ ಯಲ್ಲಾಪುರ ತಾಲೂಕಿನ ಗಣೇಶ ಪ್ರಸಾದ್ ಟ್ರೇಡರ್ಸ ಅವರಿಗೆ ಮಾರಾಟ ಮಾಡಿ ಬಂದ ಹಣದಿಂದ ೮೦ ಸಾವಿರ ನೀಡಿ ಹೊಸ ಟಾಟಾ ಎಸ್ ವಾಹನ ಖರೀದಿ ಮಾಡಿದ್ದಾನೆ.ಪೈನಾನ್ಸನಲ್ಲಿ ಕಂತು ಮೂಲಕ ಸಾಲಮಾಡಿ ವಾಹನ ಖರೀದಿ ಮಾಡಿರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಬಾಯಿ ಬಿಟ್ಟಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ಹೆಚ್ಚುವರಿ ಎಸ್.ಪಿ ಎಸ್ ಬದರಿನಾಥ, ಡಿ.ವಾಯ್.ಎಸ್.ಪಿ ರವಿ ನಾಯ್ಕ, ಸಿ.ಪಿ.ಐ ಸಿದ್ದಪ್ಪ ಸಿಮಾನಿ ಅವರ ನೇತ್ರತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ಕೈ ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ್ ಮಬನೂರ, ಎನ್. ಡಿ. ಜಕ್ಲಣ್ಣನವರ ಹಾಗೂ ಮಣಿಮಾಲನ್ ಮೆಸ್ತಾ, ಸಲೀಮ, ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ್ ಲಮಾಣಿ, ವಿವೇಕ್ ಪಟಗಾರ, ಸಹದೇವ, ಶರತ್ ದೇವಳ್ಳಿ ಇವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ಪ್ರಶಂಸಿಸಿ ಸಾಧನೆ ವ್ಯಕ್ತಪಡಿಸಿದ್ದಾರೆ
ವರದಿ: ಮಂಜುನಾಥ ಹರಿಜನ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…