Latest

ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು!

ಮುಂಡಗೋಡ: ಅಡಿಕೆ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿ ಆತನಿಂದ ಎರಡುವರೆ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹಾಗೂ ಅಶೋಕ ಲೈಲ್ಯಾಂಡ್ ವಾಹನ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೊಪ್ಪ ಇಂದಿರಾನಗರ ಗ್ರಾಮದ ಪಕ್ಕಿರೇಶ ದೊಡ್ಮನಿ ಬಂಧಿತ ಆರೋಪಿಯಾಗಿದ್ದಾನೆ.
ಈತನು ರಮೇಶ ಕಾಮತ್ ಹಾಗೂ ನವೀನ ಹುದ್ಲಮನಿ ಅವರ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದಾನೆ. ಘಟನೆಯ ವಿವರ:ಪಕ್ಕಿರೇಶ ದೊಡ್ಮನಿ ಇವನು ಜುಲೈ 26 ರಂದು ಹಳೂರ ಓಣಿಯಲ್ಲಿರುವ ತೋಟಗಳಲ್ಲಿಯ ಮನೆಯಲ್ಲಿದ್ದ ರಮೇಶ ಕಾಮತ್ ಹಾಗೂ ನವೀನ್ ಹುದ್ಲಮನಿ ಅವರ ಅಡಿಕೆಯನ್ನು ಕಳ್ಳತನ ಮಾಡಿ ಆ ಅಡಿಕೆಯನ್ನು ರಸ್ತೆ ಬದಿಗೆ ತಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಮನೆಗೆ ಸಾಗಿಸಿದ್ದಾನೆ ನಂತರ ಎರಡು ಮೂರು ದಿನಗಳ ನಂತರ ಯಲ್ಲಾಪುರ ತಾಲೂಕಿನ ಗಣೇಶ ಪ್ರಸಾದ್ ಟ್ರೇಡರ್ಸ ಅವರಿಗೆ ಮಾರಾಟ ಮಾಡಿ ಬಂದ ಹಣದಿಂದ ೮೦ ಸಾವಿರ ನೀಡಿ ಹೊಸ ಟಾಟಾ ಎಸ್ ವಾಹನ ಖರೀದಿ ಮಾಡಿದ್ದಾನೆ.ಪೈನಾನ್ಸನಲ್ಲಿ ಕಂತು ಮೂಲಕ ಸಾಲಮಾಡಿ ವಾಹನ ಖರೀದಿ ಮಾಡಿರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಬಾಯಿ ಬಿಟ್ಟಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ಹೆಚ್ಚುವರಿ ಎಸ್.ಪಿ ಎಸ್ ಬದರಿನಾಥ, ಡಿ.ವಾಯ್.ಎಸ್.ಪಿ ರವಿ ನಾಯ್ಕ, ಸಿ.ಪಿ.ಐ ಸಿದ್ದಪ್ಪ ಸಿಮಾನಿ ಅವರ ನೇತ್ರತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ಕೈ ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ‌.ಎಸ್.ಐ ಬಸವರಾಜ್ ಮಬನೂರ, ಎನ್. ಡಿ. ಜಕ್ಲಣ್ಣನವರ ಹಾಗೂ ಮಣಿಮಾಲನ್ ಮೆಸ್ತಾ, ಸಲೀಮ, ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ್ ಲಮಾಣಿ, ವಿವೇಕ್ ಪಟಗಾರ, ಸಹದೇವ, ಶರತ್ ದೇವಳ್ಳಿ ಇವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ಪ್ರಶಂಸಿಸಿ ಸಾಧನೆ ವ್ಯಕ್ತಪಡಿಸಿದ್ದಾರೆ
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago