Latest

ಒಂಟಿ ಮಹಿಳೆಯ ಬರ್ಬರ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯ ಎಡೆಮುರಿ ಕಟ್ಟಿರುವ ಪೊಲೀಸರು

ಧಾರವಾಡ ನಗರದ ಸವಿತಾ ಎಂಬ ಮಹಿಳೆ ಎಲ್ಲರ ಹಾಗೇ ಮದುವೆ ಮಾಡಿಕೊಂಡು ಸಂಸಾರ ಮಾಡಬೇಕೆಂದು ಕನಸುಗಳನ್ನು ಕಟ್ಟಿಕೊಂಡು ಮದುವೆಯಾಗಿ ಸ್ವಲ್ಪೇ ದಿನಗಳಲ್ಲಿ ಗಂಡನನ್ನು ಕಳೆದುಕೊಂಡಿದ್ದಳು ಗಂಡನನ್ನು ಕಳೆದುಕೊಂಡಿದ್ದ ಈ ಮಹಿಳೆ ಚಿಕ್ಕ ಪುಟ್ಟ ಕೆಲಸ ಮಾಡಿಕೊಂಡು ಧಾರವಾಡ ನೆಹರೂ ನಗರದ ನೆಹರೂ ನಗರದಲ್ಲಿ ವಾಸವಾಗಿದ್ದಳು ಗಂಡನನ್ನು ಕಳೆದುಕೊಂಡಿದ್ದ ಸವಿತಾಳಿಗೆ ಆನಂದ್ ಎಂಬ ಯುವಕ ಪರಿಚಯವಾಗಿ ಇಬ್ಬರ ಮದ್ಯೆ ಸ್ನೇಹ ಬೆಳೆದಿತ್ತು ಇಬ್ಬರ ಸ್ನೇಹ ದಿನದಿಂದ ದಿನಕ್ಕೆ ಹೆಚ್ಚಾಗಿ ಇವರಿಬ್ಬರ ನಡುವಿನ ಸಂಬಂಧ ಅನೈತಿಕ (ಅಕ್ರಮ ಸಂಬಂಧ) ಸಂಬಂಧವಾಗಿ ತಿರುಗಿತ್ತು ಇಬ್ಬರು ಅನೈತಿಕ ಸಂಬಂಧಕ್ಕೇ ಪರಸ್ಪರ ಒಪ್ಪಿಕೊಂಡಿದ್ದರು ಹೀಗೆ ಇದ್ದಾಗ ಆನಂದ್ ಸವಿತಾಳಿಗೆ ಆಗಾಗ ಹಣವನ್ನು ಕೊಡುತ್ತಿದ್ದ.

ಆದರೇ ಇಷ್ಟಕ್ಕೇ ಸುಮ್ಮನಿರದ ಸವಿತಾ ಮತ್ತೊಬ್ಬ ವ್ಯಕ್ತಿಯ ಜೊತೆ ಸಂಪರ್ಕದಲ್ಲಿ ಇರುವುದನ್ನು ತಿಳಿದ ಆನಂದ್ ಸವಿತಾಳಿಗೆ ನಾ ಏನೂ ಕಡಿಮೆ ಮಾಡಿಲ್ಲ ಆದರೂ ಇವಳು ಹೀಗೆ ನನಗೆ ಮೋಸ ಮಾಡುತ್ತಿದ್ದಾಳೆ ಎಂದರೇ ಇವಳನ್ನು ಜೀವ ಸಹಿತ ಉಳಿಸಬಾರದು ಎಂದು ಕೋಪವನ್ನು ನೆತ್ತಿಗೆರಿಸಿಕೊಂಡ ಆನಂದ ಕಳೆದ ಅ 14 ರಂದು ಸವಿತಾಳ ಉಸಿರು ನಿಲ್ಲಿಸಲು ನಿರ್ಧರಿಸಿದ ಅ 14 ರ ರಾತ್ರಿ ಧಾರವಾಡ ಜಿಲ್ಲಾ ಆಸ್ಪತ್ರೆಯ ಬಳಿ ಯಾವದೋ ಕೆಲಸಕ್ಕೇ ಬಂದಿದ್ದ ಸವಿತಳನ್ನು ಜಿಲ್ಲಾ ಆಸ್ಪತ್ರೆಯ ಬಳಿ ರಸ್ತೆ ಮದ್ಯೆ ತಡೆದು ಹರಿತವಾದ ತಲ್ವಾರ್ ದಿಂದ ಮನ ಬಂದಂತೆ ಕೊಚ್ಚಿ ಅವಳನ್ನು ಕೊಲೆ ಮಾಡಿ ಅಲ್ಲಿಂದ ತಲೆ ಮರೆಸಿಕೊಂಡಿದ್ದ ನಂತರ ತಡ ರಾತ್ರಿ ಆ ದಾರಿಯಲ್ಲಿ ಓಡಾಡುವ ಸಾರ್ವಜನಿಕರು ಸವಿತಾಳ ಮೃತ ದೇಹವನ್ನು ನೋಡಿ ಭಯದಿಂದ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದರು.

ಆ ರಾತ್ರೀ ಧಾರವಾಡ ನಗರದ ಸ್ಥಳಿಯರು ಬೆಚ್ಚಿಬಿದ್ದಿದ್ದರು ಇತ್ತ ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಸವಿತಾಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಲೆಗಾರ ಆನಂದನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿ ಆನಂದನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

15 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago