Latest

ಒಂಟಿ ಮಹಿಳೆಯ ಬರ್ಬರ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯ ಎಡೆಮುರಿ ಕಟ್ಟಿರುವ ಪೊಲೀಸರು

ಧಾರವಾಡ ನಗರದ ಸವಿತಾ ಎಂಬ ಮಹಿಳೆ ಎಲ್ಲರ ಹಾಗೇ ಮದುವೆ ಮಾಡಿಕೊಂಡು ಸಂಸಾರ ಮಾಡಬೇಕೆಂದು ಕನಸುಗಳನ್ನು ಕಟ್ಟಿಕೊಂಡು ಮದುವೆಯಾಗಿ ಸ್ವಲ್ಪೇ ದಿನಗಳಲ್ಲಿ ಗಂಡನನ್ನು ಕಳೆದುಕೊಂಡಿದ್ದಳು ಗಂಡನನ್ನು ಕಳೆದುಕೊಂಡಿದ್ದ ಈ ಮಹಿಳೆ ಚಿಕ್ಕ ಪುಟ್ಟ ಕೆಲಸ ಮಾಡಿಕೊಂಡು ಧಾರವಾಡ ನೆಹರೂ ನಗರದ ನೆಹರೂ ನಗರದಲ್ಲಿ ವಾಸವಾಗಿದ್ದಳು ಗಂಡನನ್ನು ಕಳೆದುಕೊಂಡಿದ್ದ ಸವಿತಾಳಿಗೆ ಆನಂದ್ ಎಂಬ ಯುವಕ ಪರಿಚಯವಾಗಿ ಇಬ್ಬರ ಮದ್ಯೆ ಸ್ನೇಹ ಬೆಳೆದಿತ್ತು ಇಬ್ಬರ ಸ್ನೇಹ ದಿನದಿಂದ ದಿನಕ್ಕೆ ಹೆಚ್ಚಾಗಿ ಇವರಿಬ್ಬರ ನಡುವಿನ ಸಂಬಂಧ ಅನೈತಿಕ (ಅಕ್ರಮ ಸಂಬಂಧ) ಸಂಬಂಧವಾಗಿ ತಿರುಗಿತ್ತು ಇಬ್ಬರು ಅನೈತಿಕ ಸಂಬಂಧಕ್ಕೇ ಪರಸ್ಪರ ಒಪ್ಪಿಕೊಂಡಿದ್ದರು ಹೀಗೆ ಇದ್ದಾಗ ಆನಂದ್ ಸವಿತಾಳಿಗೆ ಆಗಾಗ ಹಣವನ್ನು ಕೊಡುತ್ತಿದ್ದ.

ಆದರೇ ಇಷ್ಟಕ್ಕೇ ಸುಮ್ಮನಿರದ ಸವಿತಾ ಮತ್ತೊಬ್ಬ ವ್ಯಕ್ತಿಯ ಜೊತೆ ಸಂಪರ್ಕದಲ್ಲಿ ಇರುವುದನ್ನು ತಿಳಿದ ಆನಂದ್ ಸವಿತಾಳಿಗೆ ನಾ ಏನೂ ಕಡಿಮೆ ಮಾಡಿಲ್ಲ ಆದರೂ ಇವಳು ಹೀಗೆ ನನಗೆ ಮೋಸ ಮಾಡುತ್ತಿದ್ದಾಳೆ ಎಂದರೇ ಇವಳನ್ನು ಜೀವ ಸಹಿತ ಉಳಿಸಬಾರದು ಎಂದು ಕೋಪವನ್ನು ನೆತ್ತಿಗೆರಿಸಿಕೊಂಡ ಆನಂದ ಕಳೆದ ಅ 14 ರಂದು ಸವಿತಾಳ ಉಸಿರು ನಿಲ್ಲಿಸಲು ನಿರ್ಧರಿಸಿದ ಅ 14 ರ ರಾತ್ರಿ ಧಾರವಾಡ ಜಿಲ್ಲಾ ಆಸ್ಪತ್ರೆಯ ಬಳಿ ಯಾವದೋ ಕೆಲಸಕ್ಕೇ ಬಂದಿದ್ದ ಸವಿತಳನ್ನು ಜಿಲ್ಲಾ ಆಸ್ಪತ್ರೆಯ ಬಳಿ ರಸ್ತೆ ಮದ್ಯೆ ತಡೆದು ಹರಿತವಾದ ತಲ್ವಾರ್ ದಿಂದ ಮನ ಬಂದಂತೆ ಕೊಚ್ಚಿ ಅವಳನ್ನು ಕೊಲೆ ಮಾಡಿ ಅಲ್ಲಿಂದ ತಲೆ ಮರೆಸಿಕೊಂಡಿದ್ದ ನಂತರ ತಡ ರಾತ್ರಿ ಆ ದಾರಿಯಲ್ಲಿ ಓಡಾಡುವ ಸಾರ್ವಜನಿಕರು ಸವಿತಾಳ ಮೃತ ದೇಹವನ್ನು ನೋಡಿ ಭಯದಿಂದ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದರು.

ಆ ರಾತ್ರೀ ಧಾರವಾಡ ನಗರದ ಸ್ಥಳಿಯರು ಬೆಚ್ಚಿಬಿದ್ದಿದ್ದರು ಇತ್ತ ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಸವಿತಾಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಲೆಗಾರ ಆನಂದನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿ ಆನಂದನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago