ಧಾರವಾಡ ಜಿಲ್ಲೆಯಲ್ಲಿ ಲಾರಿ ಚಾಲಕನ ಹಣವನ್ನು ಪೋಲಿಸ್ ಅಧಿಕಾರಿ ಜೇಬಿಗೆ ಹಾಕಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡಿ ನಿಯಮ ಉಲ್ಲಂಘಿಸುವವರಿಗೇ ದಂಡ ವಿಧಿಸಲು ಕಾರ್ಯಾಚರಣೆ ನಡೆಸುವ ವೇಳೆ ಕರ್ತವ್ಯ ನಿರತ ಎ ಎಸ್ ಐ ಭೂದೇಶ್ ಮಡಿವಾಳರ ಮರಳು ಸಾಗಾಟದ ಲಾರಿ ಒಂದು ಬಂದಿದೆ ಆಗ ಕುಂದಗೋಳ ಪೋಲಿಸ್ ಠಾಣೆಯ ಪೊಲೀಸರು ಈ ಲಾರಿಯನ್ನು ತಡೆದು ತಪಾಸಣೆ ಮಾಡಿ ಚಾಲಕನಿಗೆ ದಂಡ ಹಾಕುವಾಗ ಲಾರಿ ಚಾಲಕ ಸರ್ ದಂಡ ಏನೂ ಬೇಡ ನನ್ನ ಬಳಿ ಇರುವ ಹಣವನ್ನು ಕೊಟ್ಟುಬಿಡುತ್ತೇನೆ ತಗೊಂಡು ಬಿಟ್ಟುಬಿಡಿ ಎಂದಾಗ ಎ ಎಸ್ ಐ ಮಡಿವಾಳರ ಲಾರಿ ಚಾಲಕನ ಬಳಿ ಇದ್ದ ಹಣವನ್ನು ಪಡೆದುಕೊಂಡು ಜೇಬಿಗೆ ಹಾಕಿಕೊಂಡಿದ್ದಾರೆ ಲಾರಿ ಹಾಗೂ ಚಾಲಕನನ್ನು ಸುಮ್ಮನೇ ಕಳುಹಿಸಿದ್ದಾರೆ.
ಪ್ರತಿದಿನ ಗದಗ ಜಿಲ್ಲೆ ಲಕ್ಷ್ಮೇಶ್ವರ ಕಡೆಯಿಂದ ಮರಳು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ನೂರಾರು ಲಾರಿಗಳು ಓಡಾಡುತ್ತವೆ ಈ ಎಲ್ಲಾ ಮರಳು ತುಂಬಿದ ಲಾರಿಗಳು ಧಾರವಾಡ ಜಿಲ್ಲೆಯ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಓಡಾಡುತ್ತವೆ ಅದಕ್ಕೆ ಹೀಗೆ ಆಗುತ್ತಿರುವುದು ಸಾಮನ್ಯವಾಗಿಬಿಟ್ಟಿದೆ ಎಂಬುದು ಈ ಪ್ರಕರಣಕ್ಕೆ ಸಾಕ್ಷಿ.
ಆದರೂ ಸರಕಾರಿ ಸೇವೆಯಲ್ಲಿ ಪೋಲಿಸ್ ಅಧಿಕಾರಿ ಆಗೀ ಸರ್ಕಾರದಿಂದ ಸಂಬಳ ಪಡೆದೂ ಈ ರೀತಿಯಲ್ಲಿ ಲಂಚದ ರೂಪದಲ್ಲಿ ಚಾಲಕರ ಕಡೆಯಿಂದ ಹಣ ಪಡೆದ ಕುಂದಗೋಳ ಪೋಲಿಸ್ ಠಾಣೆಯ ಎ ಎಸ್ ಐ ಭೂದೆಶ್ ಮಡಿವಾಳರ ಮೇಲೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಗಲಾಸುರ್ ಯಾವ ಕ್ರಮವನ್ನು ಜರುಗಿಸುತ್ತಾರೋ ಗೊತ್ತಿಲ್ಲ. ಜಿಲ್ಲೆಯಲ್ಲಿರುವ ಇಂತಹ ಲಂಚಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…