Latest

ಲಾರಿ ಚಾಲಕನ ಹಣವನ್ನು ಜೇಬಿಗೆ ಇಳಿಸಿಕೊಂಡ ಪೊಲೀಸ್!

ಧಾರವಾಡ ಜಿಲ್ಲೆಯಲ್ಲಿ ಲಾರಿ ಚಾಲಕನ ಹಣವನ್ನು ಪೋಲಿಸ್ ಅಧಿಕಾರಿ ಜೇಬಿಗೆ ಹಾಕಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡಿ ನಿಯಮ ಉಲ್ಲಂಘಿಸುವವರಿಗೇ ದಂಡ ವಿಧಿಸಲು ಕಾರ್ಯಾಚರಣೆ ನಡೆಸುವ ವೇಳೆ ಕರ್ತವ್ಯ ನಿರತ ಎ ಎಸ್ ಐ ಭೂದೇಶ್ ಮಡಿವಾಳರ ಮರಳು ಸಾಗಾಟದ ಲಾರಿ ಒಂದು ಬಂದಿದೆ ಆಗ ಕುಂದಗೋಳ ಪೋಲಿಸ್ ಠಾಣೆಯ ಪೊಲೀಸರು ಈ ಲಾರಿಯನ್ನು ತಡೆದು ತಪಾಸಣೆ ಮಾಡಿ ಚಾಲಕನಿಗೆ ದಂಡ ಹಾಕುವಾಗ ಲಾರಿ ಚಾಲಕ ಸರ್ ದಂಡ ಏನೂ ಬೇಡ ನನ್ನ ಬಳಿ ಇರುವ ಹಣವನ್ನು ಕೊಟ್ಟುಬಿಡುತ್ತೇನೆ ತಗೊಂಡು ಬಿಟ್ಟುಬಿಡಿ ಎಂದಾಗ ಎ ಎಸ್ ಐ ಮಡಿವಾಳರ ಲಾರಿ ಚಾಲಕನ ಬಳಿ ಇದ್ದ ಹಣವನ್ನು ಪಡೆದುಕೊಂಡು ಜೇಬಿಗೆ ಹಾಕಿಕೊಂಡಿದ್ದಾರೆ ಲಾರಿ ಹಾಗೂ ಚಾಲಕನನ್ನು ಸುಮ್ಮನೇ ಕಳುಹಿಸಿದ್ದಾರೆ.

ಪ್ರತಿದಿನ ಗದಗ ಜಿಲ್ಲೆ ಲಕ್ಷ್ಮೇಶ್ವರ ಕಡೆಯಿಂದ ಮರಳು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ನೂರಾರು ಲಾರಿಗಳು ಓಡಾಡುತ್ತವೆ ಈ ಎಲ್ಲಾ ಮರಳು ತುಂಬಿದ ಲಾರಿಗಳು ಧಾರವಾಡ ಜಿಲ್ಲೆಯ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಓಡಾಡುತ್ತವೆ ಅದಕ್ಕೆ ಹೀಗೆ ಆಗುತ್ತಿರುವುದು ಸಾಮನ್ಯವಾಗಿಬಿಟ್ಟಿದೆ ಎಂಬುದು ಈ ಪ್ರಕರಣಕ್ಕೆ ಸಾಕ್ಷಿ.

ಆದರೂ ಸರಕಾರಿ ಸೇವೆಯಲ್ಲಿ ಪೋಲಿಸ್ ಅಧಿಕಾರಿ ಆಗೀ ಸರ್ಕಾರದಿಂದ ಸಂಬಳ ಪಡೆದೂ ಈ ರೀತಿಯಲ್ಲಿ ಲಂಚದ ರೂಪದಲ್ಲಿ ಚಾಲಕರ ಕಡೆಯಿಂದ ಹಣ ಪಡೆದ ಕುಂದಗೋಳ ಪೋಲಿಸ್ ಠಾಣೆಯ ಎ ಎಸ್ ಐ ಭೂದೆಶ್ ಮಡಿವಾಳರ ಮೇಲೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಗಲಾಸುರ್ ಯಾವ ಕ್ರಮವನ್ನು ಜರುಗಿಸುತ್ತಾರೋ ಗೊತ್ತಿಲ್ಲ. ಜಿಲ್ಲೆಯಲ್ಲಿರುವ ಇಂತಹ ಲಂಚಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago