Latest

ಲಾರಿ ಚಾಲಕನ ಹಣವನ್ನು ಜೇಬಿಗೆ ಇಳಿಸಿಕೊಂಡ ಪೊಲೀಸ್!

ಧಾರವಾಡ ಜಿಲ್ಲೆಯಲ್ಲಿ ಲಾರಿ ಚಾಲಕನ ಹಣವನ್ನು ಪೋಲಿಸ್ ಅಧಿಕಾರಿ ಜೇಬಿಗೆ ಹಾಕಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡಿ ನಿಯಮ ಉಲ್ಲಂಘಿಸುವವರಿಗೇ ದಂಡ ವಿಧಿಸಲು ಕಾರ್ಯಾಚರಣೆ ನಡೆಸುವ ವೇಳೆ ಕರ್ತವ್ಯ ನಿರತ ಎ ಎಸ್ ಐ ಭೂದೇಶ್ ಮಡಿವಾಳರ ಮರಳು ಸಾಗಾಟದ ಲಾರಿ ಒಂದು ಬಂದಿದೆ ಆಗ ಕುಂದಗೋಳ ಪೋಲಿಸ್ ಠಾಣೆಯ ಪೊಲೀಸರು ಈ ಲಾರಿಯನ್ನು ತಡೆದು ತಪಾಸಣೆ ಮಾಡಿ ಚಾಲಕನಿಗೆ ದಂಡ ಹಾಕುವಾಗ ಲಾರಿ ಚಾಲಕ ಸರ್ ದಂಡ ಏನೂ ಬೇಡ ನನ್ನ ಬಳಿ ಇರುವ ಹಣವನ್ನು ಕೊಟ್ಟುಬಿಡುತ್ತೇನೆ ತಗೊಂಡು ಬಿಟ್ಟುಬಿಡಿ ಎಂದಾಗ ಎ ಎಸ್ ಐ ಮಡಿವಾಳರ ಲಾರಿ ಚಾಲಕನ ಬಳಿ ಇದ್ದ ಹಣವನ್ನು ಪಡೆದುಕೊಂಡು ಜೇಬಿಗೆ ಹಾಕಿಕೊಂಡಿದ್ದಾರೆ ಲಾರಿ ಹಾಗೂ ಚಾಲಕನನ್ನು ಸುಮ್ಮನೇ ಕಳುಹಿಸಿದ್ದಾರೆ.

ಪ್ರತಿದಿನ ಗದಗ ಜಿಲ್ಲೆ ಲಕ್ಷ್ಮೇಶ್ವರ ಕಡೆಯಿಂದ ಮರಳು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ನೂರಾರು ಲಾರಿಗಳು ಓಡಾಡುತ್ತವೆ ಈ ಎಲ್ಲಾ ಮರಳು ತುಂಬಿದ ಲಾರಿಗಳು ಧಾರವಾಡ ಜಿಲ್ಲೆಯ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಓಡಾಡುತ್ತವೆ ಅದಕ್ಕೆ ಹೀಗೆ ಆಗುತ್ತಿರುವುದು ಸಾಮನ್ಯವಾಗಿಬಿಟ್ಟಿದೆ ಎಂಬುದು ಈ ಪ್ರಕರಣಕ್ಕೆ ಸಾಕ್ಷಿ.

ಆದರೂ ಸರಕಾರಿ ಸೇವೆಯಲ್ಲಿ ಪೋಲಿಸ್ ಅಧಿಕಾರಿ ಆಗೀ ಸರ್ಕಾರದಿಂದ ಸಂಬಳ ಪಡೆದೂ ಈ ರೀತಿಯಲ್ಲಿ ಲಂಚದ ರೂಪದಲ್ಲಿ ಚಾಲಕರ ಕಡೆಯಿಂದ ಹಣ ಪಡೆದ ಕುಂದಗೋಳ ಪೋಲಿಸ್ ಠಾಣೆಯ ಎ ಎಸ್ ಐ ಭೂದೆಶ್ ಮಡಿವಾಳರ ಮೇಲೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಗಲಾಸುರ್ ಯಾವ ಕ್ರಮವನ್ನು ಜರುಗಿಸುತ್ತಾರೋ ಗೊತ್ತಿಲ್ಲ. ಜಿಲ್ಲೆಯಲ್ಲಿರುವ ಇಂತಹ ಲಂಚಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

6 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

11 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

11 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

11 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

11 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

16 hours ago