ಧಾರವಾಡ ಜಿಲ್ಲೆಯಲ್ಲಿ ಲಾರಿ ಚಾಲಕನ ಹಣವನ್ನು ಪೋಲಿಸ್ ಅಧಿಕಾರಿ ಜೇಬಿಗೆ ಹಾಕಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡಿ ನಿಯಮ ಉಲ್ಲಂಘಿಸುವವರಿಗೇ ದಂಡ ವಿಧಿಸಲು ಕಾರ್ಯಾಚರಣೆ ನಡೆಸುವ ವೇಳೆ ಕರ್ತವ್ಯ ನಿರತ ಎ ಎಸ್ ಐ ಭೂದೇಶ್ ಮಡಿವಾಳರ ಮರಳು ಸಾಗಾಟದ ಲಾರಿ ಒಂದು ಬಂದಿದೆ ಆಗ ಕುಂದಗೋಳ ಪೋಲಿಸ್ ಠಾಣೆಯ ಪೊಲೀಸರು ಈ ಲಾರಿಯನ್ನು ತಡೆದು ತಪಾಸಣೆ ಮಾಡಿ ಚಾಲಕನಿಗೆ ದಂಡ ಹಾಕುವಾಗ ಲಾರಿ ಚಾಲಕ ಸರ್ ದಂಡ ಏನೂ ಬೇಡ ನನ್ನ ಬಳಿ ಇರುವ ಹಣವನ್ನು ಕೊಟ್ಟುಬಿಡುತ್ತೇನೆ ತಗೊಂಡು ಬಿಟ್ಟುಬಿಡಿ ಎಂದಾಗ ಎ ಎಸ್ ಐ ಮಡಿವಾಳರ ಲಾರಿ ಚಾಲಕನ ಬಳಿ ಇದ್ದ ಹಣವನ್ನು ಪಡೆದುಕೊಂಡು ಜೇಬಿಗೆ ಹಾಕಿಕೊಂಡಿದ್ದಾರೆ ಲಾರಿ ಹಾಗೂ ಚಾಲಕನನ್ನು ಸುಮ್ಮನೇ ಕಳುಹಿಸಿದ್ದಾರೆ.
ಪ್ರತಿದಿನ ಗದಗ ಜಿಲ್ಲೆ ಲಕ್ಷ್ಮೇಶ್ವರ ಕಡೆಯಿಂದ ಮರಳು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ನೂರಾರು ಲಾರಿಗಳು ಓಡಾಡುತ್ತವೆ ಈ ಎಲ್ಲಾ ಮರಳು ತುಂಬಿದ ಲಾರಿಗಳು ಧಾರವಾಡ ಜಿಲ್ಲೆಯ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಓಡಾಡುತ್ತವೆ ಅದಕ್ಕೆ ಹೀಗೆ ಆಗುತ್ತಿರುವುದು ಸಾಮನ್ಯವಾಗಿಬಿಟ್ಟಿದೆ ಎಂಬುದು ಈ ಪ್ರಕರಣಕ್ಕೆ ಸಾಕ್ಷಿ.
ಆದರೂ ಸರಕಾರಿ ಸೇವೆಯಲ್ಲಿ ಪೋಲಿಸ್ ಅಧಿಕಾರಿ ಆಗೀ ಸರ್ಕಾರದಿಂದ ಸಂಬಳ ಪಡೆದೂ ಈ ರೀತಿಯಲ್ಲಿ ಲಂಚದ ರೂಪದಲ್ಲಿ ಚಾಲಕರ ಕಡೆಯಿಂದ ಹಣ ಪಡೆದ ಕುಂದಗೋಳ ಪೋಲಿಸ್ ಠಾಣೆಯ ಎ ಎಸ್ ಐ ಭೂದೆಶ್ ಮಡಿವಾಳರ ಮೇಲೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಗಲಾಸುರ್ ಯಾವ ಕ್ರಮವನ್ನು ಜರುಗಿಸುತ್ತಾರೋ ಗೊತ್ತಿಲ್ಲ. ಜಿಲ್ಲೆಯಲ್ಲಿರುವ ಇಂತಹ ಲಂಚಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…
ರಾಜ್ಯದಲ್ಲಿ ದಾಂಪತ್ಯ ಸಂಬಂಧಗಳನ್ನು ಬಿಟ್ಟು ಬೇರೊಬ್ಬರ ಜೊತೆ ಓಡಿ ಹೋಗುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, Bengaluruನಲ್ಲಿ ಮತ್ತೊಂದು ಸಂಚಲನಕಾರಿ ಪ್ರಕರಣ…
ಲಂಚ ಸ್ವೀಕರಿಸುತ್ತಿದ್ದ ವೇಳೆ Kerur Police Station ನ ಪಿಎಸ್ಐ Bheemappa Rabakavi ಹಾಗೂ ಪೇದೆ Santosh Biradar ಅವರನ್ನು…
ಒಮ್ಮೆ ತನ್ನ ಪ್ರತಿಭೆಯಿಂದ ರಾಜ್ಯದ ಹೆಮ್ಮೆಯಾಗಿ ಗುರುತಿಸಿಕೊಂಡಿದ್ದ ಯುವ ಅಧಿಕಾರಿ, ಇದೀಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಾಗಿದ್ದಾರೆ. Kajal Meena ಎಂಬ…