ಮೈಸೂರು: ಬಿರುಗಾಳಿ ಸಮೇತ ಬಿದ್ದ ಭಾರಿ ಮಳೆಗೆ ಮೈಸೂರು ನಗರದ ಹಲವಡೆ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ. ಮರದ ಕೊಂಬೆಗಳ ತೆರುವಿಗೆ ಪಾಲಿಕೆ ಸಿಬ್ಬಂದಿಗಳೊಂದಿಗೆ ಪೊಲೀಸರು ಸಹ ಮುಂದಾಗಿ ಅಚ್ಚರಿ ಮೂಡಿಸಿದ್ದಾರೆ. ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಭಾರಿ ಮಳೆಗೆ ಒಟ್ಟು ಐದು ಮರಗಳ ಕೊಂಬೆಗಳು ಮುರಿದುಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಸಿಬ್ಬಂದಿಗಳ ಸಮೇತ ಆಗಮಿಸಿದ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಮತ್ತು ದೇವರಾಜ ಸಂಚಾರ ಠಾಣಾ ಸಿಬ್ಬಂದಿಗಳು ಪಾಲಿಕೆಯ ಅಭಯ ತಂಡದೊಂದಿಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಕೊಂಬೆಗಳ ತೆರವಿಗೆ ಮುಂದಾದರು. ಸಲೀಂ ಅಬ್ಬಾಸ್ ಮತ್ತು ಸಿಬ್ಬಂದಿಗಳ ಕಾರ್ಯಕ್ಕೆ ಸಾರ್ವಜನಿಕರು ಸಹ ಸಾಥ್ ನೀಡಿದರು. ಪೊಲೀಸರ ಸಾಮಾಜಿಕ ಕಳಕಳಿಗೆ ಸಾರ್ವಜನಿಕರ ಮೆಚ್ಚುಗೆಯೂ ವ್ಯಕ್ತವಾಯಿತು. ಪೊಲೀಸರ ಕಾರ್ಯವೈಖರಿಗೆ ಇಲಾಖಾ ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…