Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 hour ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago