Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago