Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago