ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…