Latest

ನಿರ್ಮಾಣವಾದ ಎಂಟೆ ತಿಂಗಳಿಗೆ ಕಿತ್ತುಹೋದ ರಸ್ತೆ!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago