ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…