ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…