ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…