Categories: CrimeLatest

‘ನೇಹಾ ಹಿರೇಮಠ್‌ಗೆ ಆದ ಗತಿಯೇ ನಿನಗೂ ಆಗುತ್ತದೆ’ ಪೋಕ್ಸೋ ಆರೋಪಿ ಜೈಲಿನಿಂದಲೇ ವಿಡಿಯೋ ಕಾಲ್ ಬೆದರಿಕೆ

ಜೈಲುಗಳಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಧಾರವಾಡ ಕೇಂದ್ರ ಕಾರಾಗೃಹದಿಂದಲೇ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಸಂತ್ರಸ್ತೆಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫರ್ವೇಜ್ ಎಂಬಾತ, ಜೈಲಿನೊಳಗಿಂದಲೇ ಬಾಲಕಿಗೆ ನಿರಂತರವಾಗಿ ವಿಡಿಯೋ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಸಾಕ್ಷಿ ಹೇಳುವಂತೆ ಒತ್ತಾಯಿಸಿದ್ದು, ಪಾಲಿಸದಿದ್ದರೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡುತ್ತಿದ್ದನು. ಅಲ್ಲದೇ, ಕರೆ ಸ್ವೀಕರಿಸದಿದ್ದರೆ ‘ನೇಹಾ ಹಿರೇಮಠ್‌ಗೆ ಆದ ಗತಿಯೇ ನಿನಗೂ ಆಗುತ್ತದೆ’ ಎಂದು ಬೆದರಿಕೆ ಹಾಕಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜೊತೆಗೆ, ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಅಕ್ರಮ ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಎಬ್ಬಿಸಿದೆ. ಅಧಿಕಾರಿಗಳು ಮೊಬೈಲ್ ಬಳಕೆಗೆ ಕಟ್ಟುನಿಟ್ಟಿನ ನಿಷೇಧವಿದೆ ಎಂದು ಹೇಳುತ್ತಿದ್ದರೂ, ವಾಸ್ತವ ಸ್ಥಿತಿ ಬೇರೆ ಎಂಬುದು ಈ ಪ್ರಕರಣದಿಂದ ಸ್ಪಷ್ಟವಾಗಿದೆ.

ಇದಲ್ಲದೆ, ಈ ಬೆಳವಣಿಗೆ ಕುರಿತು ತಿಳಿದಿದ್ದರೂ ಜೈಲಾಧಿಕಾರಿಗಳು ನಿರ್ಲಕ್ಷ್ಯ ತೋರಿದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕಿದೆ ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago