Categories: Latest

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ ಮೂಡಿಸಿತ್ತು. ಇದೀಗ ಈ ಹಾರಾಟದ ಹಿಂದಿನ ನಿಜವಾದ ಕಾರಣ ಬಹಿರಂಗವಾಗಿದ್ದು, ಇದು ಯಾವುದೇ ಕಾನೂನುಬಾಹಿರ ಚಟುವಟಿಕೆ ಅಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತು ಗೃಹ ಸಚಿವರು ವಿಧಾನ ಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದ್ದು, ಇದು ಕೇಂದ್ರ ಸರ್ಕಾರ ಅನುಮೋದಿತ ವೈಜ್ಞಾನಿಕ ಸಮೀಕ್ಷೆಯ ಭಾಗವಾಗಿದೆ ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ. ಆರತಿ ಕೃಷ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಲೆನಾಡು ಭಾಗದಲ್ಲಿ ನಡೆದ ಈ ಹಾರಾಟ ಖನಿಜ ಸಂಪತ್ತಿನ ಪತ್ತೆಗಾಗಿ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭೂಗರ್ಭದಲ್ಲಿರುವ ಖನಿಜ ನಿಕ್ಷೇಪಗಳನ್ನು ಗುರುತಿಸುವ ಉದ್ದೇಶದಿಂದ ಈ ಸಮೀಕ್ಷೆ ಕೈಗೊಳ್ಳಲಾಗಿದೆ. ಈ ಕಾರ್ಯವನ್ನು ಭಾರತ ಸರ್ಕಾರ ಎಕ್ಸ್-ಕ್ಯಾಲಿಬರ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನೀಡಿದ್ದು, ಹಿಮಾಲಯನ್ ಹೆಲಿ ಸರ್ವಿಸ್ ಲಿಮಿಟೆಡ್ ಸಹಯೋಗದಲ್ಲಿ ಹಾರಾಟ ನಡೆಸಲಾಗುತ್ತಿದೆ.

ಕಡಿಮೆ ಎತ್ತರದಲ್ಲಿ ಹಾರಾಡುವ ಈ ವಿಮಾನದಲ್ಲಿ ಅತ್ಯಾಧುನಿಕ ಮ್ಯಾಗ್ನೆಟಿಕ್ ಗ್ರೇಡಿಯೋ ಮೀಟರ್ ಮತ್ತು ರೇಡಿಯೋ ಮೀಟರ್ ಸಂವೇದಕಗಳನ್ನು ಅಳವಡಿಸಲಾಗಿದ್ದು, ಭೂಗರ್ಭದ ಖನಿಜಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಮೀಕ್ಷೆ ಕಾರ್ಯಕ್ಕೆ ಫೆಬ್ರವರಿ 13, 2026ರಿಂದ ಜುಲೈ 31, 2026ರವರೆಗೆ ಅನುಮತಿ ನೀಡಲಾಗಿದೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿಲ್ಲ ಎಂಬ ಗೊಂದಲಕ್ಕೂ ಸರ್ಕಾರ ಸ್ಪಷ್ಟನೆ ನೀಡಿದೆ. ಹಿಮಾಲಯನ್ ಹೆಲಿ ಸರ್ವಿಸ್ ಸಂಸ್ಥೆಯು ಫೆಬ್ರವರಿ 13ರಂದೇ ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದೆ ಎಂದು ತಿಳಿಸಿದೆ. ಸಾರ್ವಜನಿಕರಲ್ಲಿ ಉಂಟಾದ ಆತಂಕ ನಿವಾರಣೆಗೆ ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago