Corruption

ಜನನ ಪ್ರಮಾಣ ಪತ್ರ ನೀಡಲು 3 ತಿಂಗಳ ಅವಧಿ ಪಡೆದ ನಂತರವೂ ಹಣ ಕೇಳಿದ ಭ್ರಷರು!

ಕುಂದಗೋಳ: ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತು ತಂದಿದ್ದೇವೆ ಓದುಗರೆ…!
ಈ ಕಾರ್ಯಾಲಯದಲ್ಲಿ ಪ್ರಮಾಣ ಪತ್ರಗಳಿಗೆ ರೈತರು, ಸಾರ್ವಜನಿಕರು ದುಡ್ಡು ಕೊಟ್ಟರೆ ಮಾತ್ರ ಇಲ್ಲಿ ಅರ್ಜಿಗಳು ವಿಲೇವಾರಿ ಹೊಂದುತ್ತವೆ. ಇಲ್ಲವಾದಲ್ಲಿ ನಾಳೆ ಬಾ ಅಂತ ಹೇಳಿ ಕಳಸುತ್ತಾರೆ. ಇಷ್ಟು ದಿನಗಳವಳಿಗೆ ಅರ್ಜಿ ವಿಲೇವಾರಿ ಹೊಂದಬೇಕು ಎಂದು ತಹಶೀಲ್ದಾರ್ ಕಛೇರಿಯ ಒಳಾಂಗಣ ದಲ್ಲಿ ನಾಮಫಲಕ ಅಳವಡಿಸಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳು ಹಣ ಕೊಟ್ಟರೆ ಸಾಕು ಬೇಗನೆ ಪ್ರಮಾಣ ಪತ್ರಗಳನ್ನು ವಿತರಸುತ್ತಾರೆ. ಹಾಗಾದರೆ ಬಡವರ ಪಾಡು…?

ಕುಂದಗೋಳ ಮೂಲದ ಪೋಷಕರು ತಮ್ಮ ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು 2022ರ ಜೂನ್ ತಿಂಗಳಿನಲ್ಲಿ ಜನನ ಪ್ರಮಾಣತಕ್ಕಾಗಿ ತಹಶೀಲ್ದಾರ್ ಕಛೇರಿಯಲ್ಲಿ ಅರ್ಜಿ ಸಲ್ಲಿಸದು ಮೂರು ತಿಂಗಳ ನಂತರ ಅಂದರೇ ಸೆಪ್ಟಂಬರ್ 2022 ರಲ್ಲಿ ಜನನ ಪ್ರಮಾಣ ಪತ್ರವನ್ನು ಸರಕಾರಿ ಕಛೇರಿ ಸಿಬ್ಬಂದಿ ನೀಡಿದ ನಂತರ ಐವತ್ತು ರೂಪಾಯಿ ನೀಡುವಂತೆ ಹೇಳಿರುತ್ತಾನೆ. ಜನನ ಪ್ರಮಾಣ ಪತ್ರ ನೀಡಲು ಮೂರು ತಿಂಗಳ ಕಾಲ ಸಮಯವನ್ನು ತೆಗದುಕೂಂಡಿದ್ದಾರೆ ಎಂದರೇ ಎಷ್ಟರಮಟ್ಟಿಗೆ ಸರಕಾರಿ ಕಛೇರಿಗಳಲ್ಲಿ ಕೆಲಸ ಬೇಗ ಸಾಗುತ್ತದೆ? ಮೂರು ತಿಂಗಳ ಅವದಿ ಪಡೆದ ನಂತರವೂ ಹಣ ಕೇಳುತ್ತಿದ್ದಾರೆ ಎಂದರೇ ಇವರುಗಳು ಎಂತ ಲಂಚ ಬಾಕರೀರಾಬೇಕು?

ಕುಂದಗೋಳ ಪಟ್ಟಣದ ತಹಶೀಲ್ದಾರ್ ಕಛೇರಿ ಒಳಾಂಗಣದ ನಾಮಫಲಕ ದಲ್ಲಿ ಜನನ ಮತ್ತು ಮರಣ ಪತ್ರದಲ್ಲಿ ಏಳು ದಿನಗಳಿಂದ ಹದಿನೈದು ದಿನಗಳವಳಿಗೆ ಕೊಟ್ಟಿರುವ ಅರ್ಜಿಯನ್ನು ವಿಲೇವಾರಿ ಮಾಡಿ ತಕ್ಷಣ ಪ್ರಮಾಣ ಪತ್ರ ನೀಡಬೇಕು ಎಂದು ನಾಮಫಲಕದಲ್ಲಿ ಗೋಡೆಗೆ ನೇತು ಹಾಕಿದ್ದಾರೆ. ಆದರೆ ಹೆಸರಿಗೆ ಮಾತ್ರ ಅನ್ನಬಹುದು. ಈ ನಾಮಫಲಕ.
ಕುಂದಗೋಳ ತಾಲೂಕಿನ ದಂಡಾಧಿಕಾರಿ ಕಛೇರಿಯಲ್ಲಿ ಸಾಕಷ್ಟು ಪ್ರಮಾಣ ಪತ್ರಗಳು ದೊರೆಯುತ್ತೇವೆ ಅಂತ ಸೇವೆಗಳ ಪಟ್ಟಿ ನಾಮಫಲಕದಲ್ಲಿ ಅಳವಡಿಸಿದ್ದಾರೆ. ಅದರಂತೆ ಈ ಪ್ರಮಾಣ ಪತ್ರಕ್ಕೆ ಇಷ್ಟು ಸರಕಾರಿ ಶುಲ್ಕ ಅಂತ ಹಾಕದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಭ್ರಷ್ಟಾಚಾರಕ್ಕೆ ಇದೊಂದು ಕಾರಣವಾದರೆ ಅಧಿಕಾರಿಗಳು ನಾವು ಕೆಲಸ ಮಾಡಿರುತ್ತೇವೆ ಸ್ವಲ್ಪ ಹಣ ಕೊಡಿ ಅಂತ ಬಾಯಿಬಿಟ್ಟು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಹಾಗಾದರೆ ಅಧಿಕಾರಿಗಳಿಗೆ ಸರಕಾರ ವೇತನ ನೀಡುವುದಿಲ್ಲವ? ಎಂಬ ಪ್ರಶ್ನೆ ಉಳಿದಿದೆ. ಜನಸಾಮಾನ್ಯರ ಪರಿಸ್ಥಿತಿ ಏನು? ಸಾರ್ವಜನಿಕರು ಸರಕಾರಕ್ಕೆ ತೆರಿಗೆ ಹಣ ಪಾವತಿಸುತ್ತಾರೆ. ಅದೇ ತೆರಿಗೆ ಹಣದಿಂದ ಸರಕಾರಿ ಅಧಿಕಾರಿಗಳಿಗೆ ವೇತನ ನೀಡುತ್ತದೆ. ಅಷ್ಟೇಲ್ಲದೆ ಸಂಬಳಗಿಂತ ಗಿಂಬಳಕ್ಕೆ ಕೈ ಚಾಚುತ್ತಾರೆ. ಇಲ್ಲಿನ ಅಧಿಕಾರಿಗಳು. ಜಿಲ್ಲಾಧಿಕಾರಿ ಇತ್ತ ಕಡೆ ಗಮನ ಕೋಡದೇ ಇರುವುದೂಂದು ಕಾರಣ ಅಂತ ಹೇಳಬಹುದು.
ಇದಕ್ಕೆ ಅನುಸಾರವಾಗಿ ದೇಶದ ಪ್ರಧಾನ ಮಂತ್ರಿ “ಮೈ ನಹೀ ಕಾಹೋಂಗ್ ಕಾಣೇ ನೈ ದೇವೋಂಗ್” ಅಂತ ಅಬ್ಬರದ ಭಾಷಣದಲ್ಲಿ ಬೊಬ್ಬೆ ಹೊಡೆಯುತ್ತಾರೆ. ಹಾಗಾದರೆ ಜನರು ಪಾಡು ನಿಮ್ಮ ಗಮನಕ್ಕೆ ಬಂದಿಲವ್ವಾ ಅನ್ನೋದು ಒಂದು ಕಡೆಯಾದರೆ, ಭಂಡ ಅಧಿಕಾರಿಗಳ ಲಂಚಾವತಾರ ಬ್ರೇಕ್ ಬಿಳವುದು ಯಾವಾಗ ಇದೊಂದು ಕಡೆ.
ಒಟ್ಟನಲ್ಲಿ ಅಧಿಕಾರಿಗಳು ಹಗಲು ದರೋಡೆಗೆ ಇಳಿದುಬಿಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಭ್ರಷ್ಟ ಅಧಿಕಾರಿಗಳ ಅಮಾನತು ಮಾಡಿ ಸೂಕ್ತವಾದ ಕ್ರಮ ಜರುಗಿಸಬೇಕು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago