Corruption

ಜನನ ಪ್ರಮಾಣ ಪತ್ರ ನೀಡಲು 3 ತಿಂಗಳ ಅವಧಿ ಪಡೆದ ನಂತರವೂ ಹಣ ಕೇಳಿದ ಭ್ರಷರು!

ಕುಂದಗೋಳ: ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತು ತಂದಿದ್ದೇವೆ ಓದುಗರೆ…!
ಈ ಕಾರ್ಯಾಲಯದಲ್ಲಿ ಪ್ರಮಾಣ ಪತ್ರಗಳಿಗೆ ರೈತರು, ಸಾರ್ವಜನಿಕರು ದುಡ್ಡು ಕೊಟ್ಟರೆ ಮಾತ್ರ ಇಲ್ಲಿ ಅರ್ಜಿಗಳು ವಿಲೇವಾರಿ ಹೊಂದುತ್ತವೆ. ಇಲ್ಲವಾದಲ್ಲಿ ನಾಳೆ ಬಾ ಅಂತ ಹೇಳಿ ಕಳಸುತ್ತಾರೆ. ಇಷ್ಟು ದಿನಗಳವಳಿಗೆ ಅರ್ಜಿ ವಿಲೇವಾರಿ ಹೊಂದಬೇಕು ಎಂದು ತಹಶೀಲ್ದಾರ್ ಕಛೇರಿಯ ಒಳಾಂಗಣ ದಲ್ಲಿ ನಾಮಫಲಕ ಅಳವಡಿಸಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳು ಹಣ ಕೊಟ್ಟರೆ ಸಾಕು ಬೇಗನೆ ಪ್ರಮಾಣ ಪತ್ರಗಳನ್ನು ವಿತರಸುತ್ತಾರೆ. ಹಾಗಾದರೆ ಬಡವರ ಪಾಡು…?

ಕುಂದಗೋಳ ಮೂಲದ ಪೋಷಕರು ತಮ್ಮ ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು 2022ರ ಜೂನ್ ತಿಂಗಳಿನಲ್ಲಿ ಜನನ ಪ್ರಮಾಣತಕ್ಕಾಗಿ ತಹಶೀಲ್ದಾರ್ ಕಛೇರಿಯಲ್ಲಿ ಅರ್ಜಿ ಸಲ್ಲಿಸದು ಮೂರು ತಿಂಗಳ ನಂತರ ಅಂದರೇ ಸೆಪ್ಟಂಬರ್ 2022 ರಲ್ಲಿ ಜನನ ಪ್ರಮಾಣ ಪತ್ರವನ್ನು ಸರಕಾರಿ ಕಛೇರಿ ಸಿಬ್ಬಂದಿ ನೀಡಿದ ನಂತರ ಐವತ್ತು ರೂಪಾಯಿ ನೀಡುವಂತೆ ಹೇಳಿರುತ್ತಾನೆ. ಜನನ ಪ್ರಮಾಣ ಪತ್ರ ನೀಡಲು ಮೂರು ತಿಂಗಳ ಕಾಲ ಸಮಯವನ್ನು ತೆಗದುಕೂಂಡಿದ್ದಾರೆ ಎಂದರೇ ಎಷ್ಟರಮಟ್ಟಿಗೆ ಸರಕಾರಿ ಕಛೇರಿಗಳಲ್ಲಿ ಕೆಲಸ ಬೇಗ ಸಾಗುತ್ತದೆ? ಮೂರು ತಿಂಗಳ ಅವದಿ ಪಡೆದ ನಂತರವೂ ಹಣ ಕೇಳುತ್ತಿದ್ದಾರೆ ಎಂದರೇ ಇವರುಗಳು ಎಂತ ಲಂಚ ಬಾಕರೀರಾಬೇಕು?

ಕುಂದಗೋಳ ಪಟ್ಟಣದ ತಹಶೀಲ್ದಾರ್ ಕಛೇರಿ ಒಳಾಂಗಣದ ನಾಮಫಲಕ ದಲ್ಲಿ ಜನನ ಮತ್ತು ಮರಣ ಪತ್ರದಲ್ಲಿ ಏಳು ದಿನಗಳಿಂದ ಹದಿನೈದು ದಿನಗಳವಳಿಗೆ ಕೊಟ್ಟಿರುವ ಅರ್ಜಿಯನ್ನು ವಿಲೇವಾರಿ ಮಾಡಿ ತಕ್ಷಣ ಪ್ರಮಾಣ ಪತ್ರ ನೀಡಬೇಕು ಎಂದು ನಾಮಫಲಕದಲ್ಲಿ ಗೋಡೆಗೆ ನೇತು ಹಾಕಿದ್ದಾರೆ. ಆದರೆ ಹೆಸರಿಗೆ ಮಾತ್ರ ಅನ್ನಬಹುದು. ಈ ನಾಮಫಲಕ.
ಕುಂದಗೋಳ ತಾಲೂಕಿನ ದಂಡಾಧಿಕಾರಿ ಕಛೇರಿಯಲ್ಲಿ ಸಾಕಷ್ಟು ಪ್ರಮಾಣ ಪತ್ರಗಳು ದೊರೆಯುತ್ತೇವೆ ಅಂತ ಸೇವೆಗಳ ಪಟ್ಟಿ ನಾಮಫಲಕದಲ್ಲಿ ಅಳವಡಿಸಿದ್ದಾರೆ. ಅದರಂತೆ ಈ ಪ್ರಮಾಣ ಪತ್ರಕ್ಕೆ ಇಷ್ಟು ಸರಕಾರಿ ಶುಲ್ಕ ಅಂತ ಹಾಕದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಭ್ರಷ್ಟಾಚಾರಕ್ಕೆ ಇದೊಂದು ಕಾರಣವಾದರೆ ಅಧಿಕಾರಿಗಳು ನಾವು ಕೆಲಸ ಮಾಡಿರುತ್ತೇವೆ ಸ್ವಲ್ಪ ಹಣ ಕೊಡಿ ಅಂತ ಬಾಯಿಬಿಟ್ಟು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಹಾಗಾದರೆ ಅಧಿಕಾರಿಗಳಿಗೆ ಸರಕಾರ ವೇತನ ನೀಡುವುದಿಲ್ಲವ? ಎಂಬ ಪ್ರಶ್ನೆ ಉಳಿದಿದೆ. ಜನಸಾಮಾನ್ಯರ ಪರಿಸ್ಥಿತಿ ಏನು? ಸಾರ್ವಜನಿಕರು ಸರಕಾರಕ್ಕೆ ತೆರಿಗೆ ಹಣ ಪಾವತಿಸುತ್ತಾರೆ. ಅದೇ ತೆರಿಗೆ ಹಣದಿಂದ ಸರಕಾರಿ ಅಧಿಕಾರಿಗಳಿಗೆ ವೇತನ ನೀಡುತ್ತದೆ. ಅಷ್ಟೇಲ್ಲದೆ ಸಂಬಳಗಿಂತ ಗಿಂಬಳಕ್ಕೆ ಕೈ ಚಾಚುತ್ತಾರೆ. ಇಲ್ಲಿನ ಅಧಿಕಾರಿಗಳು. ಜಿಲ್ಲಾಧಿಕಾರಿ ಇತ್ತ ಕಡೆ ಗಮನ ಕೋಡದೇ ಇರುವುದೂಂದು ಕಾರಣ ಅಂತ ಹೇಳಬಹುದು.
ಇದಕ್ಕೆ ಅನುಸಾರವಾಗಿ ದೇಶದ ಪ್ರಧಾನ ಮಂತ್ರಿ “ಮೈ ನಹೀ ಕಾಹೋಂಗ್ ಕಾಣೇ ನೈ ದೇವೋಂಗ್” ಅಂತ ಅಬ್ಬರದ ಭಾಷಣದಲ್ಲಿ ಬೊಬ್ಬೆ ಹೊಡೆಯುತ್ತಾರೆ. ಹಾಗಾದರೆ ಜನರು ಪಾಡು ನಿಮ್ಮ ಗಮನಕ್ಕೆ ಬಂದಿಲವ್ವಾ ಅನ್ನೋದು ಒಂದು ಕಡೆಯಾದರೆ, ಭಂಡ ಅಧಿಕಾರಿಗಳ ಲಂಚಾವತಾರ ಬ್ರೇಕ್ ಬಿಳವುದು ಯಾವಾಗ ಇದೊಂದು ಕಡೆ.
ಒಟ್ಟನಲ್ಲಿ ಅಧಿಕಾರಿಗಳು ಹಗಲು ದರೋಡೆಗೆ ಇಳಿದುಬಿಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಭ್ರಷ್ಟ ಅಧಿಕಾರಿಗಳ ಅಮಾನತು ಮಾಡಿ ಸೂಕ್ತವಾದ ಕ್ರಮ ಜರುಗಿಸಬೇಕು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago