Categories: CrimeLatest

ಸೊಸೆಯನ್ನು ಬಿಡದ ಕಾಮುಕ ತಂದೆಯ ಕೊಲೆಗೆ ಮಗನೇ ಕೊಟ್ಟ ಸುಪಾರಿ..!

ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿ ಮೂಡಿಸುವ ತಿರುವು ಸಿಕ್ಕಿದೆ. 74 ವರ್ಷದ ಪಂಪಣ್ಣ ಸಜ್ಜನ ಕೊಲೆ ಪ್ರಕರಣದಲ್ಲಿ ಆರಂಭದಲ್ಲಿ ಯಾರ ಕೈವಾಡ ಎಂಬುದು ಸ್ಪಷ್ಟವಾಗದಿದ್ದರೂ, ತನಿಖೆ ಮುಂದುವರಿದಂತೆ ಈ ಕೊಲೆಯ ಹಿಂದಿನ ನಿಜಾಂಶ ಬಯಲಾಗಿದೆ. ತಂದೆಯ ಅನೈತಿಕ ವರ್ತನೆಯಿಂದ ಬೇಸತ್ತ ಮಗನೇ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಮಾರ್ಚ್ 12ರ ರಾತ್ರಿ ಗೋನಾಳ ಗ್ರಾಮದಲ್ಲಿ ಪಂಪಣ್ಣನನ್ನು ಕೊಲೆ ಮಾಡಲಾಗಿತ್ತು. ಘಟನೆ ಬಳಿಕ ಮೃತನ ಮಗ ಶರಣಬಸಪ್ಪ ವಡಗೇರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಗೊಂದಲಕ್ಕೀಡಾಗಿದ್ದರೂ, ನಾಲ್ಕು ದಿನಗಳ ತನಿಖೆಯ ನಂತರ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿರುಪತಿ ಮೂಲದ ರಮೇಶ್, ಜಿ. ವಿರೇಶ್, ಎಂ. ವಿರೇಶ್ ಹಾಗೂ ಕೃಷ್ಟ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪಂಪಣ್ಣನ ಹತ್ಯೆಗೆ ಸುಪಾರಿ ನೀಡಿದ್ದು ಅವನ ಮತ್ತೊಬ್ಬ ಪುತ್ರ ನರಸರೆಡ್ಡಿ ಎಂಬುದು ತಿಳಿದುಬಂದಿದೆ. ಆರಂಭದಲ್ಲಿ ಆಸ್ತಿ ವಿಚಾರಕ್ಕಾಗಿ ಕೊಲೆ ನಡೆದಿದೆ ಎಂಬ ಅನುಮಾನವಿದ್ದರೂ, ತನಿಖೆಯ ವೇಳೆ ಪಂಪಣ್ಣನ ಮೊಬೈಲ್‌ನಲ್ಲಿ ಸಿಕ್ಕ ಫೋಟೋಗಳು ಸತ್ಯವನ್ನು ಬಯಲಿಗೆಳೆದವು.

ಮೊಬೈಲ್ ಪರಿಶೀಲನೆಯ ವೇಳೆ ಹಲವು ಮಹಿಳೆಯರೊಂದಿಗೆ ಪಂಪಣ್ಣ ತೆಗೆಸಿಕೊಂಡಿದ್ದ ಫೋಟೋಗಳು ಪತ್ತೆಯಾಗಿದ್ದು, ಅವನು ಅನೈತಿಕ ಸಂಬಂಧಗಳನ್ನು ಹೊಂದಿದ್ದನೆಂಬುದು ತಿಳಿದುಬಂದಿದೆ. ಪಂಪಣ್ಣ ತನ್ನ ಕುಟುಂಬದಿಂದ ದೂರವಾಗಿ ಹೊಲದಲ್ಲಿ ವಾಸವಾಗಿದ್ದು, ಅಲ್ಲಿ ಮಹಿಳೆಯರನ್ನು ಕರೆಸಿ ದುಡ್ಡಿನ ಆಮಿಷ ನೀಡಿ ಸಂಬಂಧ ಹೊಂದುತ್ತಿದ್ದನೆಂಬ ಆರೋಪ ಹೊರಬಂದಿದೆ.

ಪಂಪಣ್ಣನಿಗೆ ಒಟ್ಟು 48 ಎಕರೆ ಜಮೀನು ಇದ್ದು, ಅದರಲ್ಲಿ 12 ಎಕರೆ ಜಮೀನನ್ನು ತನ್ನ ಮೂವರು ಮಕ್ಕಳಿಗೆ ಹಂಚಿಕೊಟ್ಟಿದ್ದ. ಉಳಿದ ಜಮೀನಿನಿಂದ ಬಂದ ಆದಾಯವನ್ನು ತನ್ನ ವೈಯಕ್ತಿಕ ಖರ್ಚುಗಳಿಗೆ ಬಳಸುತ್ತಿದ್ದನು. ಕಳೆದ 15 ವರ್ಷಗಳಿಂದ ಹೊಲದಲ್ಲೇ ಶೆಡ್ ನಿರ್ಮಿಸಿಕೊಂಡು ಪತ್ನಿಯೊಂದಿಗೆ ವಾಸವಾಗಿದ್ದ. ಪತ್ನಿ ಎಂಟು ವರ್ಷಗಳ ಹಿಂದೆ ಸಾವನ್ನಪ್ಪಿದ ಬಳಿಕವೂ ಏಕಾಂಗಿಯಾಗಿ ಅಲ್ಲೇ ಜೀವನ ನಡೆಸುತ್ತಿದ್ದನು.

ಆದರೆ, ಅವನ ಅನೈತಿಕ ವರ್ತನೆ ಕುಟುಂಬದೊಳಗೂ ತಲುಪಿತ್ತು. ತನ್ನ ಸೊಸೆಯ ಜೊತೆಯೂ ಅಸಭ್ಯ ವರ್ತನೆ ನಡೆಸುತ್ತಿದ್ದನೆಂಬ ವಿಷಯ ತಿಳಿದ ನರಸರೆಡ್ಡಿ ಕೋಪಗೊಂಡು ತಂದೆಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ. ನಂತರ ನಾಲ್ವರನ್ನು ಸಂಪರ್ಕಿಸಿ ಸುಮಾರು 2 ಲಕ್ಷ ರೂಪಾಯಿ ನೀಡಿ ಕೊಲೆ ಮಾಡಲು ಸುಪಾರಿ ನೀಡಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಈ ಘಟನೆ ಕುಟುಂಬ ಸಂಬಂಧಗಳ ಕುಸಿತ ಮತ್ತು ಅನೈತಿಕ ವರ್ತನೆಯ ಪರಿಣಾಮ ಎಷ್ಟರ ಮಟ್ಟಿಗೆ ಭೀಕರವಾಗಬಹುದು ಎಂಬುದಕ್ಕೆ ಉದಾಹರಣೆಯಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago