Latest

ಪತ್ನಿ ತೊರೆದು ಹೋದ ಸಿಟ್ಟಲ್ಲಿ ಅತ್ತೆಯ ಮೂಗು ಕಚ್ಚಿದ ಅಳಿಯ!

ಪತ್ನಿ ತೊರೆದು ಹೋದಳೆಂದು ಸಿಟ್ಟಿಗೆದ್ದ ಅಳಿಯನೊರ್ವ ಅತ್ತೆಯ ಮೂಗು ಕತ್ತರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ರಾಜು ಬಘೇಲ್ ಎಂಬಾತನೇ ಹೀಗೆ ಅತ್ತೆಯ ಮೂಗು ಕತ್ತರಿಸಿದ ದುರುಳ ಅಳಿಯ. ಈ ರಾಜು ಬಘೇಲ್ ಸದಾ ತನ್ನ ಹೆಂಡತಿ ಶ್ಯಾಮ್ ಸುಂದರಿಯನ್ನು ಥಳಿಸುತ್ತಿದ್ದ. ಗಂಡನ ಕಿರುಕುಳದಿಂದ ಬೇಸತ್ತ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ತವರು ಮನೆ ಸೇರಿಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ರಾಜು ಬಘೇಲ್ ಈ ಕೃತ್ಯವೆಸಗಿದ್ದಾನೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರೇನಾ ಜಿಲ್ಲೆಯ ಚಂದಾಪುರ ಗ್ರಾಮದ ನಿವಾಸಿಯಾದ 55 ವರ್ಷದ ರಾಮ್ ವಿಲಾಸಿ ತನ್ನ ಮಗಳನ್ನು ನೋಡುವ ಸಲುವಾಗಿ ತನ್ನ ಗಂಡ ರಾಮಹಿತ್ ಬಘೇಲ್ ಹಾಗೂ ಪುತ್ರನೊಂದಿಗೆ ಮಗಳ ಮನೆಗೆ ತೆರಳಿದ್ದಾರೆ. ಮಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರಾಮ್ ವಿಲಾಸಿಯ ಅಳಿಯ ರಾಜು ಬಘೇಲ್ ಹಾಗೂ ಆತನ ಇಬ್ಬರು ಸಂಬಂಧಿಗಳು ಇವರನ್ನು ರಸ್ತೆ ಮಧ್ಯೆ ಅಡ್ಡ ಹಾಕಿದ್ದು, ಜಗಳ ಮಾಡಲು ಶುರು ಮಾಡಿದ್ದಾರೆ. ಇದಕ್ಕೆ ಅತ್ತೆ ರಾಮ್ ವಿಲಾಸಿ ವಿರೋಧ ವ್ಯಕ್ತಪಡಿಸಿದಾಗ ಅಳಿಯ ರಾಜು ಬಘೇಲ್ ಆಕೆಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಅಲ್ಲದೇ ಮಾವ ರಾಮ್‌ಹಿತ್ ಬಘೇಲ್ ಅವರನ್ನು ಥಳಿಸಿದ್ದಾನೆ.
ಈ ಬಗ್ಗೆ ಸ್ಥಳೀಯರು 100 ಗೆ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಹೀಗೆ ಅತ್ತೆಯನ್ನು ಕಚ್ಚಿ ಗಾಯಗೊಳಿಸಿದ ಅಳಿಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಯೋಗೇಂದ್ರ ಸಿಂಗ್ ಜಾಡೌನ್ ಹೇಳಿದರು.

ಭ್ರಷ್ಟರ ಬೇಟೆ

Recent Posts

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

3 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

10 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

1 day ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago